ನಮ್ಮ ಮೈಸೂರ ದಸರಾ 2025

ಯುವ ಸಂಭ್ರಮ | ಮಾದಕ ವ್ಯಸನಗಳ ಬಗ್ಗೆ ಜಾಗೃತಿ ಮೂಡಿಸಿದ ನೃತ್ಯ ರೂಪಕ

ಮೈಸೂರು : ಯುವ ಸಮೂಹ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗಿ ಜೀವನ ಹಾಳು ಮಾಡಿಕೊಳ್ಳುತ್ತಿರುವ ಸಂಗತಿ ಯುವ ಸಂಭ್ರಮದಲ್ಲಿ ನೃತ್ಯದ ಸ್ವರೂಪ ಪಡೆಯಿತು.

ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ ಅಂಗವಾಗಿ ನಡೆಯುತ್ತಿರುವ ಯುವ ಸಂಭ್ರಮದ ೭ನೇ ದಿನವಾದ ಮಂಗಳವಾರ ಕೆ.ಆರ್.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ದಾಸರಾಗಿ ಕುಟುಂಬಕ್ಕೆ ಶಾಪವಾಗಿ, ಬದುಕಿಗೆ ಮುಳುವಾಗುವ ಸಂಗತಿಯನ್ನು ನೃತ್ಯದ ಮೂಲಕ ಕಟ್ಟಿಕೊಟ್ಟರು. ನೆರೆದಿದ್ದ ಯುವ ಸಮೂಹ ಎದ್ದು ನಿಂತು ಚಪ್ಪಾಳೆ ತಟ್ಟಿ ನೃತ್ಯದ ಸಂದೇಶವನ್ನು ಸ್ವೀಕರಿಸಿದರು.

ಎಸ್‌ಎಸ್‌ಎಲ್‌ಸಿ ಮುಗಿಸಿ ಕಾಲೇಜು ವಿದ್ಯಾಭ್ಯಾಸಕ್ಕೆ ನಗರದ ಕಾಲೇಜಿಗೆ ಸೇರುವ ಯುವಕನೊಬ್ಬ ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ದುಶ್ಚಟಕ್ಕೆ ಬಿದ್ದು ತನ್ನ ತಾಯಿಯನ್ನು ಕಳೆದುಕೊಂಡು ರೋಧಿಸುವ ಘಟನೆಯನ್ನು ನೃತ್ಯದ ಮೂಲಕ ಸೊಗಸಾಗಿ ವೇದಿಕೆ ಮೇಲೆ ತಂದು ನೆರೆದಿದ್ದವರ ಮನ ಗೆದ್ದರು. ಇದರೊಂದಿಗೆ ಕನ್ನಡ ಪ್ರೇಮ, ನಾಡಿನ ಸಂಸ್ಕೃತಿ, ಜಾನಪದ ನೃತ್ಯದ ಸೊಬಗು, ಸಂವಿಧಾನದ ಮಹತ್ವ, ರೈತರ ಕೆಚ್ಚೆದೆಯ ಸೇವೆ, ಯೋಧರ ಬಲಿದಾನ, ರಾಷ್ಟ್ರೀಯ ಭಾವೈಕ್ಯತೆಗೆ ಯುವಸಂಭ್ರಮದ ವೇದಿಕೆ ಸಾಕ್ಷಿಯಾಯಿತು. ಕರುನಾಡಿನ ದಸರಾ ವೈಭವದೊಂದಿಗೆ ಜೈ ಜವಾನ್ ಜೈ ಕಿಸಾನ್, ಜೈ ಭೀಮ್ ಘೋಷಣೆಗಳು ಮೊಳಗಿದವು.

ಕಳೆದರೆಡು ದಿನಗಳಿಂದ ಯುವ ಸಂಭ್ರಮ ವೇದಿಕೆ ಸಂಜೆ ೬ ಗಂಟೆಯೊಳಗೆ ಭರ್ತಿಯಾಗುತ್ತಿದ್ದು, ಕಿಕ್ಕಿರಿದು ನೆರೆದಿದ್ದ ಯುವ ಸಮೂಹ ಕುಣಿದು ಕುಪ್ಪಳಿಸಿ ಜೋಷ್ ನೀಡಿದರು. ಸ್ವಚ್ಚತೆಯಲ್ಲಿ ಮೈಸೂರು ಪ್ರಶಸ್ತಿಗೆ ಭಾಜನವಾಗಲು ಕಾರಣೀಭೂತರಾದ ಸ್ವಚ್ಚತಾ ಕಾರ್ಮಿಕರನ್ನು ಸನ್ಮಾನಿಸಿ, ಅವರ ಶ್ರಮವನ್ನು ಯುವ ಸಮೂಹದ ಎದೆಗೆ ತಲುಪಿಸಿದರು.

ದಟ್ಟಗಳ್ಳಿಯ ಶ್ರೀ ಲಕ್ಷ್ಮಿಹಯಗ್ರೀವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪೌರಾಣಿಕತೆಯ ಪ್ರಸಂಗವನ್ನು ನೃತ್ಯದ ಮೂಲಕ ಊಣಬಡಿಸಿದರು. ನಂಜನಗೂಡಿನ ಜೆಎಸ್‌ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ‘ದೇವ ಶ್ರೀ ಗಣೇಶ’ ಹಾಡಿನಲ್ಲಿ ಗಣಪತಿ ಹಬ್ಬದ ಸಂಭ್ರಮ ಸಾರಿದರು. ಹೊಳೆ ನರಸೀಪುರದ ಸರ್ಕಾರಿ ಪಾಲಿಟೆಕ್ನಿಕ್ ತಂಡ ಕನ್ನಡ ನಟರನ್ನು ಪರಿಚಯಿಸುವ ಸಿನಿಮಾ ಆಧಾರಿತ ನೃತ್ಯ ಪ್ರದರ್ಶಿಸಿದರು.

ಗಂಗೋತ್ರಿಯ ಜ್ಞಾನ ದೀಪ ಪ್ರಥಮ ದರ್ಜೆ ಕಾಲೇಜಿನ ತಂಡ ಹಿರಣ್ಯ ಕಶ್ಯಪನ ಜೀವನ ಚರಿತ್ರೆಯನ್ನು ಭಕ್ತ ಪ್ರಹ್ಲಾದ ಸಿನಿಮಾದ ತುಣುಕು ಮತ್ತು ಸಂಭಾಷಣೆಗಳನ್ನು ಒಳಗೊಂಡ ನೃತ್ಯ ರೂಪಕದ ಮೂಲಕ ಹರಿ ನಾರಾಯಣ ದೇವರ ಭಕ್ತಿ ಸಿಂಚನ ಗೈದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ‘ನಾಯಕ ನೀನು ಭೀಮ ರಾವ್’ ಹಾಡಿನ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಮತ್ತು ಸಂವಿಧಾನದ ಮಹತ್ವವನ್ನು ಸಾರಿದರು. ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಜಾನಪದ ನೃತ್ಯ ಸೊಬಗನ್ನು ಉಣಬಡಿಸಿದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

2 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

2 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

3 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

3 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

3 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

3 hours ago