ನಮ್ಮ ಮೈಸೂರ ದಸರಾ 2025

ಯುವ ಸಂಭ್ರಮ | ಮಾದಕ ವ್ಯಸನಗಳ ಬಗ್ಗೆ ಜಾಗೃತಿ ಮೂಡಿಸಿದ ನೃತ್ಯ ರೂಪಕ

ಮೈಸೂರು : ಯುವ ಸಮೂಹ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗಿ ಜೀವನ ಹಾಳು ಮಾಡಿಕೊಳ್ಳುತ್ತಿರುವ ಸಂಗತಿ ಯುವ ಸಂಭ್ರಮದಲ್ಲಿ ನೃತ್ಯದ ಸ್ವರೂಪ ಪಡೆಯಿತು.

ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ ಅಂಗವಾಗಿ ನಡೆಯುತ್ತಿರುವ ಯುವ ಸಂಭ್ರಮದ ೭ನೇ ದಿನವಾದ ಮಂಗಳವಾರ ಕೆ.ಆರ್.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ದಾಸರಾಗಿ ಕುಟುಂಬಕ್ಕೆ ಶಾಪವಾಗಿ, ಬದುಕಿಗೆ ಮುಳುವಾಗುವ ಸಂಗತಿಯನ್ನು ನೃತ್ಯದ ಮೂಲಕ ಕಟ್ಟಿಕೊಟ್ಟರು. ನೆರೆದಿದ್ದ ಯುವ ಸಮೂಹ ಎದ್ದು ನಿಂತು ಚಪ್ಪಾಳೆ ತಟ್ಟಿ ನೃತ್ಯದ ಸಂದೇಶವನ್ನು ಸ್ವೀಕರಿಸಿದರು.

ಎಸ್‌ಎಸ್‌ಎಲ್‌ಸಿ ಮುಗಿಸಿ ಕಾಲೇಜು ವಿದ್ಯಾಭ್ಯಾಸಕ್ಕೆ ನಗರದ ಕಾಲೇಜಿಗೆ ಸೇರುವ ಯುವಕನೊಬ್ಬ ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ದುಶ್ಚಟಕ್ಕೆ ಬಿದ್ದು ತನ್ನ ತಾಯಿಯನ್ನು ಕಳೆದುಕೊಂಡು ರೋಧಿಸುವ ಘಟನೆಯನ್ನು ನೃತ್ಯದ ಮೂಲಕ ಸೊಗಸಾಗಿ ವೇದಿಕೆ ಮೇಲೆ ತಂದು ನೆರೆದಿದ್ದವರ ಮನ ಗೆದ್ದರು. ಇದರೊಂದಿಗೆ ಕನ್ನಡ ಪ್ರೇಮ, ನಾಡಿನ ಸಂಸ್ಕೃತಿ, ಜಾನಪದ ನೃತ್ಯದ ಸೊಬಗು, ಸಂವಿಧಾನದ ಮಹತ್ವ, ರೈತರ ಕೆಚ್ಚೆದೆಯ ಸೇವೆ, ಯೋಧರ ಬಲಿದಾನ, ರಾಷ್ಟ್ರೀಯ ಭಾವೈಕ್ಯತೆಗೆ ಯುವಸಂಭ್ರಮದ ವೇದಿಕೆ ಸಾಕ್ಷಿಯಾಯಿತು. ಕರುನಾಡಿನ ದಸರಾ ವೈಭವದೊಂದಿಗೆ ಜೈ ಜವಾನ್ ಜೈ ಕಿಸಾನ್, ಜೈ ಭೀಮ್ ಘೋಷಣೆಗಳು ಮೊಳಗಿದವು.

ಕಳೆದರೆಡು ದಿನಗಳಿಂದ ಯುವ ಸಂಭ್ರಮ ವೇದಿಕೆ ಸಂಜೆ ೬ ಗಂಟೆಯೊಳಗೆ ಭರ್ತಿಯಾಗುತ್ತಿದ್ದು, ಕಿಕ್ಕಿರಿದು ನೆರೆದಿದ್ದ ಯುವ ಸಮೂಹ ಕುಣಿದು ಕುಪ್ಪಳಿಸಿ ಜೋಷ್ ನೀಡಿದರು. ಸ್ವಚ್ಚತೆಯಲ್ಲಿ ಮೈಸೂರು ಪ್ರಶಸ್ತಿಗೆ ಭಾಜನವಾಗಲು ಕಾರಣೀಭೂತರಾದ ಸ್ವಚ್ಚತಾ ಕಾರ್ಮಿಕರನ್ನು ಸನ್ಮಾನಿಸಿ, ಅವರ ಶ್ರಮವನ್ನು ಯುವ ಸಮೂಹದ ಎದೆಗೆ ತಲುಪಿಸಿದರು.

ದಟ್ಟಗಳ್ಳಿಯ ಶ್ರೀ ಲಕ್ಷ್ಮಿಹಯಗ್ರೀವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪೌರಾಣಿಕತೆಯ ಪ್ರಸಂಗವನ್ನು ನೃತ್ಯದ ಮೂಲಕ ಊಣಬಡಿಸಿದರು. ನಂಜನಗೂಡಿನ ಜೆಎಸ್‌ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ‘ದೇವ ಶ್ರೀ ಗಣೇಶ’ ಹಾಡಿನಲ್ಲಿ ಗಣಪತಿ ಹಬ್ಬದ ಸಂಭ್ರಮ ಸಾರಿದರು. ಹೊಳೆ ನರಸೀಪುರದ ಸರ್ಕಾರಿ ಪಾಲಿಟೆಕ್ನಿಕ್ ತಂಡ ಕನ್ನಡ ನಟರನ್ನು ಪರಿಚಯಿಸುವ ಸಿನಿಮಾ ಆಧಾರಿತ ನೃತ್ಯ ಪ್ರದರ್ಶಿಸಿದರು.

ಗಂಗೋತ್ರಿಯ ಜ್ಞಾನ ದೀಪ ಪ್ರಥಮ ದರ್ಜೆ ಕಾಲೇಜಿನ ತಂಡ ಹಿರಣ್ಯ ಕಶ್ಯಪನ ಜೀವನ ಚರಿತ್ರೆಯನ್ನು ಭಕ್ತ ಪ್ರಹ್ಲಾದ ಸಿನಿಮಾದ ತುಣುಕು ಮತ್ತು ಸಂಭಾಷಣೆಗಳನ್ನು ಒಳಗೊಂಡ ನೃತ್ಯ ರೂಪಕದ ಮೂಲಕ ಹರಿ ನಾರಾಯಣ ದೇವರ ಭಕ್ತಿ ಸಿಂಚನ ಗೈದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ‘ನಾಯಕ ನೀನು ಭೀಮ ರಾವ್’ ಹಾಡಿನ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಮತ್ತು ಸಂವಿಧಾನದ ಮಹತ್ವವನ್ನು ಸಾರಿದರು. ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಜಾನಪದ ನೃತ್ಯ ಸೊಬಗನ್ನು ಉಣಬಡಿಸಿದರು.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

2 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

4 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago