ನಮ್ಮ ಮೈಸೂರ ದಸರಾ 2025

ಯುವ ದಸರಾ | ಬಾಲಿವುಡ್‌ ಹಾಡಿಗೆ ಮೈಸೂರಿಗರು ಫಿದಾ…

ಮೈಸೂರು : ಯುವ ದಸರಾ ಸಂಗೀತ ಸಂಜೆಯಲಿ ಖ್ಯಾತ ಬಾಲಿವುಡ್ ಗಾಯಕ ಜುಬಿನ್ ನೌಟಿಯಾಲ್ ಅವರ ಗಾಯನದಲ್ಲಿ ಮೂಡಿ ಬಂದ ಬಾಲಿವುಡ್ ಹಾಡಿನ ಮೋಡಿಗೆ ಯುವ ಸಮೂಹ ಹುಚ್ಚೆದು ಕುಣಿದು, ತಲೆದೂಗಿದರು.

ನಗರದ ಹೊರವಲಯದ ವರ್ತುಲ ರಸ್ತೆಯ ಉತ್ತನಹಳ್ಳಿಯಲ್ಲಿ ಯುವ ದಸರಾ ಉಪ ಸಮಿತಿಯಿಂದ ಆಯೋಜಿಸಲಾಗಿದ್ದ ಮೂರನೇ ದಿನದ ಸಂಗೀತ ರಸಸಂಜೆಯಲಿ ಬಾಲಿವುಡ್‌ನ ಯುವ ಗಾಯಕ ಜುಬಿನ್ ನೌಟಿಯಾಲ್ ಅವರ ಸ್ವರದಲ್ಲಿ ಮೂಡಿದ ಹೇ ತೋ ದಿಲ್ ಯಹ್ ರುಕ್ ಜಾ ಜರಾ ಎಂಬ ಹಾಡಿಗೆ ನೆರೆದಿದ್ದ ಸಂಗೀತ ರಸಿಕರು ಕುಣಿದು, ಜತೆಗೆ ದನಿಗೂಡಿಸಿದರು.

ಮೊಹಬ್ಬತ್ ಕೆ ಮೇರಿ.. ಫಹಲಾ ಸರ್ಫ ಮೇ.., ಏಕ್ ಮುಲಾಕಾತ್ ಹು.. ತ ಮೇರೆ ಪಾಸ್ ಹೋ.., ನಾ ಚಯನೆ ಸೇ ಜೀನಾ ದೇದಿ, ನಾ ಚಯನೇ ಸೇ ಮರನಾ ದೇದಿ.., ಜಬ್ ಜಬ್ ತೇರೆ.. ಜಿಸ್ ಮೇ ಕಾ.. ಹಿಂದಿ ಗೀತೆಗಳನ್ನು ಜುಬಿನ್ ಗಿಟಾರ್ ಹಿಡಿದು, ಹೆಜ್ಜೆಹಾಕಿ ಎಲ್ಲರನ್ನು ರಂಜಿಸಿದರು. ಅಲ್ಲದೇ ಹೆಚ್ಚು ಬೇಡಿಕೆಯ ಸಯಾರಾ ಹಿಂದಿ ಚಲನಚಿತ್ರ ಗೀತೆ ತುಜಸೇ ರ್ದೂ ಮೇ ಕಿ ವಜ ಕೆ ಲಿಯೇ ಹೂ…. ಎಂದು ಹಾಡಿ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದರು.

ತೆಲುಗು ಭಾಷಾ ಗಾಯಕ ಶ್ರೀರಾಮ್ ಚಂದ್ರ ಅವರು ವೇದಿಕೆ ಮೇಲೆ ಹಿಂದಿ ಹಾಡುಗಳಾದ ಯೇ ಜವಾನಿ ಹೇ ದಿವಾನಿ ಚಿತ್ರದ ಸುಬಾನ ಜೋ ಹೋ ರಹಾ ಹೇ… ಜವಾನ್ ಚಿತ್ರದ ಚಲಿಯಾ ತೇರಿ ಓ ಕೇ, ಚಲೆಯಾ ಹೇ ರ್ಜೋ ಕೇ.., ಕೇಸರಿಯಾ ತೇರಾ.., ರಬನೆ ಬನಾಯಾ.., ಎಂಬ ಗಾಯನದೊಂದಿಗೆ ನೃತ್ಯದ ಝಳಕ್ ಅನ್ನು ಸಹ ಪ್ರದರ್ಶಿಸಿದರು. ಜೊತೆಗೆ ಕನ್ನಡದ ಮುಂಗಾರು ಮಳೆ ಚಿತ್ರದ ಅನಿಸುತಿದೆ ಯಾಕೋ ಇಂದು.. ನೀನೇನೆ ನನ್ನವಳೆಂದು ಹಾಡುವ ಮೂಲಕ ಕನ್ನಡಿಗರ ಮನಸ್ಸನ್ನು ಕದ್ದರೇ, ಬ್ರಹ್ಮಾಸ್ತ್ರದ ದೇವಾ ದೇವಾ ಹೋ. ದಿ ಬೀಸ್ಟ್ ಚಿತ್ರ ಸೇರಿದಂತೆ ಸಾಕಷ್ಟು ಪ್ರಸಿದ್ಧ ತೆಲುಗು, ಹಿಂದಿ ಚಿತ್ರಗಳ ಹಾಡುಗಳನ್ನು ಹಾಡಿ ನೆರೆದಿದ್ದ ಯುವಕರು ವಯಸ್ಕರು ನಿಂತ ಕುಣಿದು ಕುಪ್ಪಳಿಸುವಂತೆ ಮಾಡಿ ಮನಸೂರೆಗೊಳಿಸಿದರು. ಬಳಿಕ ಗಾಯಕ ಚಿನ್ಮಯ್ ಆತ್ರೇಯ ಅವರಿಂದ ಕನ್ನಡದ ಜನಪ್ರಿಯ ನಾಯಕ ನಟ ಶಂಕರ್‌ನಾಗ್ ನಟನೆಯ ಚಲನಚಿತ್ರದ ಒಂದೇ ಒಂದು ಆಸೆಯು ತೋಳಲಿ ಬಳಸಲು… ಹಾಡಿ ಕನ್ನಡ ಪ್ರೇಮ ಮೆರೆದರು. ಅಲ್ಲದೇ ರೂಪು ತೇರಾ ಮಸ್ತಾನ, ಪ್ಯಾರಾ ಮೇರಾ ದಿವಾನ ಎಂದು ಹಳೆಹಾಡುಗಳ ಗೀತೆಗಾಯನ ಅದ್ದೂರಿಯಾಗಿ ನಡೆಸಿದರು. ಅಲ್ಲದೇ ಕನ್ನಡಿಗರಲ್ಲಿ ಮತ್ತಷ್ಟು ಕುಣಿತಕ್ಕೆ ಕಿಚ್ಚು ಹಚ್ಚಲು ಡಾ.ರಾಜ್ ಕುಮಾರ್ ಅವರ ಹೊಸ ಬೆಳಕು ಮೂಡುತ್ತಿದೆ… ರವಿಚಂದ್ರನ್ ಅವರ ಯಾರೇ ನೀನು ರೋಜಾ ಹೂವೆ, ಯಾರೇ ನೀನು ಮಲ್ಲಿಗೆ ಹೂವೇ… ಕನ್ನಡದ ಹಾಡಿಗೆ ಧ್ವನಿಗೂಡಿಸಿ ಜನರಿಗೆ ಮನರಂಜನೆ ರಸದೌತಣ ಬಡಿಸಿದರು.

ಕರ್ನಾಟಕ ರೇಷ್ಮೆ ಉದ್ಯಮದ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಝಹೀರಾ ನಾಸೀಂ, ವಿಧಾನ ಪರಿಷತ್ ಸದಸ್ಯ ಸಿ.ಎನ್ ಮಂಜೇಗೌಡ, ಜಿಽಕಾರಿ ಲಕ್ಷ್ಮೀಕಾಂತ ರೆಡ್ಡಿ ಹಾಗೂ ಉಪಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

5 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago