ದೇಶ- ವಿದೇಶ

ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಮೂವರು ಐಸಿಸ್ ಸದಸ್ಯರನ್ನು ಬಂಧಿಸಿದ ಎನ್ಐಎ

ಇಸ್ಲಾಮಿಕ್ ಸ್ಟೇಟ್  ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಮೂವರನ್ನು ರಾಷ್ಟೀಯ ತನಿಖಾ ಸಂಸ್ಥೆ  ಬಂಧಿಸಿದೆ. ನವದೆಹಲಿಯ ಬಾಟ್ಲಾ ಹೌಸ್​​ನಲ್ಲಿ ಶೋಧ ನಡೆಸಿದ ನಂತರ ಇವರನ್ನು ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ. ಶಂಕಿತ ಆರೋಪಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ ಹೇಳಿದೆ. ತನಿಖಾ ಸಂಸ್ಥೆಯ ಪ್ರಕಾರ, ಅಹ್ಮದ್  ಪಟನಾ ನಿವಾಸಿಯಾಗಿದ್ದು ಈತ ಐಸಿಸ್​​ನ ಸಕ್ರಿಯ ಸದಸ್ಯ. ಭಾರತದಲ್ಲಿ ಮತ್ತು ವಿದೇಶಗಳಿಂದ ಐಸಿಸ್ ಒಲವುಳ್ಳ ಜನರಿಂದ ನಿಧಿ ಸಂಗ್ರಹಿಸುವ ಕಾರ್ಯದಲ್ಲಿ ಈತ ಭಾಗಿಯಾಗಿದ್ದ ಎಂದು ಎನ್ಐಎ ಹೇಳಿದೆ. ಈತ ಈ ಹಣವನ್ನು ಐಸಿಸ್ ಚಟುವಟಿಕೆಗಾಗಿ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಸಿರಿಯಾ ಮತ್ತು ಇತರ ಪ್ರದೇಶಗಳಿಗೆ ಕಳುಹಿಸುತ್ತಿದ್ದ ಎಂದು ಎನ್ಐಎ ಹೇಳಿದೆ. ಶನಿವಾರ ಆರೋಪಿ ಮೊಹಸಿನ್ ಅಹ್ಮದ್ ಪ್ರಸ್ತುತ ವಾಸಿಸುತ್ತಿರುವ ಬಾಟ್ಲಾ ಹೌಸ್ ಆವರಣದಲ್ಲಿ ಎನ್ಐಎ ಶೋಧ ನಡೆಸಿ ಆತನನ್ನು ಬಂಧಿಸಿತ್ತು. ಈತ ಐಸಿಸ್ ನಲ್ಲಿ ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ತೊಡಗಿಸಿಕೊಂಡಿದ್ದ. ಜೂನ್ 25ರಂದು ಎನ್ಐಎ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ.

ವಾರದ ಹಿಂದೆ ಐಸಿಸ್ ಜತೆ ಸಂಪರ್ಕವಿದೆ ಎಂದು ಮೂವರು ಶಂಕಿತ ಆರೋಪಿಗಳನ್ನು ಎನ್ಐಎ ಕರ್ನಾಟಕದಿಂದ ಬಂಧಿಸಿತ್ತು. ಕಳೆದ ಭಾನುವಾರ ಉಗ್ರ ನಿಗ್ರಹ ದಳ ದೇಶದಾದ್ಯಂತ ದಾಳಿ ನಡೆಸಿತ್ತು. ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ತುಮಕೂರಿನ ಎರಡು ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಎರಡು ಪ್ರಕರಣಗಳಲ್ಲಿ ಎನ್ಐಎ ಸ್ಥಳೀಯ ಪೊಲೀಸರ ಸಹಾಯ ಪಡೆದಿತ್ತು ಎಂದು ರಾಜ್ಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಈ ಪೈಕಿ ಸಾಜಿದ್ ಮಕ್ರಾನಿ ಮಹಾರಾಷ್ಟ್ರ ಮೂಲದವನಾಗಿದ್ದು, ತುಮಕೂರಿನಲ್ಲಿರುವ ಯುನಾನಿ ಕಾಲೇಜಿನ ಮೂರನೇ ವರ್ಷ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶ, ಗುಜರಾತ್, ಬಿಹಾರ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸೇರಿದಂತೆ ಆರು ರಾಜ್ಯಗಳಲ್ಲಿ ಶಂಕಿತರ 13 ಸ್ಥಳಗಳಲ್ಲಿ ಸಂಸ್ಥೆ ಶೋಧ ನಡೆಸಿತ್ತು. ಜೂನ್ 25 ರಂದು ಐಪಿಸಿಯ ಸೆಕ್ಷನ್ 153 ಎ, ಮತ್ತು 153 ಬಿ ಮತ್ತು ಯುಎ (ಪಿ) ಕಾಯ್ದೆಯ ಸೆಕ್ಷನ್ 18, 18 ಬಿ, 38, 39 ಮತ್ತು 40 ಅಡಿಯಲ್ಲಿ ಎನ್‌ಐಎ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದೆ.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago