ದೇಶ- ವಿದೇಶ

ಜಾನ್ಸನ್ಸ್‌ ಬೇಬಿ ಪೌಡರ್ ಇತಿಹಾಸದ ಪುಟಕ್ಕೆ

ನ್ಯೂಯಾರ್ಕ್: ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ಉತ್ಪಾದಿಸುವ ಬೇಬಿ ಪೌಡರ್ ಮಾರಾಟವನ್ನು ಜಾಗತಿಕವಾಗಿ ೨೦೨೩ರಿಂದ ನಿಲ್ಲಿಸಲು ನಿರ್ಧರಿಸಿದೆ. ಗ್ರಾಹಕರಿಂದ ಸುಮಾರು ಸಾವಿರಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಂಪನಿ ಈ ನಿರ್ಧಾರ ತಳೆದಿದೆ ಎಂದು ಅಮೆರಿಕದ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ೨೦೨೦ರಲ್ಲಿ ಉತ್ತರ ಅಮೆರಿಕದಲ್ಲಿ ಬೇಬಿ ಪೌಡರ್ ಮಾರಾಟವನ್ನು ಸ್ಥಗಿತಗೊಳಿಸಿತ್ತು. ಇದೀಗ ಇಡೀ ವಿಶ್ವದಾದ್ಯಂತ ಉತ್ಪನ್ನ ಮಾರಾಟ ಸ್ಥಗಿತಗೊಳಿಸುವುದಾಗಿ ಕಂಪನಿ ತಿಳಿಸಿದೆ. ಬೇಬಿ ಪೌಡರ್ ಕ್ಯಾನ್ಸರ್‌ಕಾರಕ ಅಂಶಗಳನ್ನು ಹೊಂದಿದೆ ಎಂಬ ಆರೋಪದಡಿ ಇದುವರೆಗೆ ೪೦ ಸಾವಿರಕ್ಕೂ ಅಧಿಕ ಗ್ರಾಹಕರು ದೂರು ಸಲ್ಲಿಸಿ ಕಾನೂನು ಸಂಘರ್ಷ ಹೂಡಿದ್ದರು.

ಆದಾಗ್ಯೂ ಕಂಪನಿಯು ‘ಟಾಲ್ಕ್ ಆಧಾರಿತ ಜಾನ್ಸನ್ಸ್ ಬೇಬಿ ಪೌಡರ್ ಸುರಕ್ಷಿತವಾಗಿದೆ, ಕಲ್ನಾರು ಹೊಂದಿರುವುದಿಲ್ಲ ಮತ್ತು ಕ್ಯಾನ್ಸರ್‌ಗೆ ಕಾರಣವಾಗುವುದಿಲ್ಲ ಎಂದು ದೃಢಪಡಿಸುವ ವಿಶ್ವದ ವೈದ್ಯಕೀಯ ತಜ್ಞರು ದಶಕಗಳ ಕಾಲ ನಡೆಸಿದ ಸ್ವತಂತ್ರ ವೈಜ್ಞಾನಿಕ ವಿಶ್ಲೇಷಣೆಯ ಹಿಂದೆ ನಾವು ದೃಢವಾಗಿ ನಿಂತಿದ್ದೇವೆ’ ಎಂದು ಹೇಳಿಕೊಂಡಿತ್ತು. ಕಂಪನಿಯ ವಿರುದ್ಧ ಹೋರಾಟ ನಡೆಸುತ್ತಿರುವ ವುಮೆನ್ಸ್ ವಾಯ್ಸ್ ಫಾರ್ ದಿ ಅರ್ಥ್ ಸಂಘಟನೆಯ ಕಾನೂನು ಸಲಹೆಗಾರ್ತಿ ಅಲೆಕ್ಸಾ ಸ್ಕ್ರಾಂಟನ್ ‘ಇದು ಯಾವುದೇ ರೀತಿಯ ಪರಿಹಾರವಲ್ಲ’ ಎಂದು ಅಭಿಪ್ರಾಯಪಟ್ಟಿದ್ದರು.

andolana

Recent Posts

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

9 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

1 hour ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

1 hour ago

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ…

1 hour ago

ಓದುಗರ ಪತ್ರ: ಸೇಡು.. ಕೇಡು !

ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…

1 hour ago

ಓದುಗರ ಪತ್ರ: ನಿರುದ್ಯೋಗ ಸಮಸ್ಯೆ ನಿವಾರಿಸಿ

ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ…

1 hour ago