ನ್ಯೂಯಾರ್ಕ್: ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ಉತ್ಪಾದಿಸುವ ಬೇಬಿ ಪೌಡರ್ ಮಾರಾಟವನ್ನು ಜಾಗತಿಕವಾಗಿ ೨೦೨೩ರಿಂದ ನಿಲ್ಲಿಸಲು ನಿರ್ಧರಿಸಿದೆ. ಗ್ರಾಹಕರಿಂದ ಸುಮಾರು ಸಾವಿರಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಂಪನಿ ಈ ನಿರ್ಧಾರ ತಳೆದಿದೆ ಎಂದು ಅಮೆರಿಕದ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ೨೦೨೦ರಲ್ಲಿ ಉತ್ತರ ಅಮೆರಿಕದಲ್ಲಿ ಬೇಬಿ ಪೌಡರ್ ಮಾರಾಟವನ್ನು ಸ್ಥಗಿತಗೊಳಿಸಿತ್ತು. ಇದೀಗ ಇಡೀ ವಿಶ್ವದಾದ್ಯಂತ ಉತ್ಪನ್ನ ಮಾರಾಟ ಸ್ಥಗಿತಗೊಳಿಸುವುದಾಗಿ ಕಂಪನಿ ತಿಳಿಸಿದೆ. ಬೇಬಿ ಪೌಡರ್ ಕ್ಯಾನ್ಸರ್ಕಾರಕ ಅಂಶಗಳನ್ನು ಹೊಂದಿದೆ ಎಂಬ ಆರೋಪದಡಿ ಇದುವರೆಗೆ ೪೦ ಸಾವಿರಕ್ಕೂ ಅಧಿಕ ಗ್ರಾಹಕರು ದೂರು ಸಲ್ಲಿಸಿ ಕಾನೂನು ಸಂಘರ್ಷ ಹೂಡಿದ್ದರು.
ಆದಾಗ್ಯೂ ಕಂಪನಿಯು ‘ಟಾಲ್ಕ್ ಆಧಾರಿತ ಜಾನ್ಸನ್ಸ್ ಬೇಬಿ ಪೌಡರ್ ಸುರಕ್ಷಿತವಾಗಿದೆ, ಕಲ್ನಾರು ಹೊಂದಿರುವುದಿಲ್ಲ ಮತ್ತು ಕ್ಯಾನ್ಸರ್ಗೆ ಕಾರಣವಾಗುವುದಿಲ್ಲ ಎಂದು ದೃಢಪಡಿಸುವ ವಿಶ್ವದ ವೈದ್ಯಕೀಯ ತಜ್ಞರು ದಶಕಗಳ ಕಾಲ ನಡೆಸಿದ ಸ್ವತಂತ್ರ ವೈಜ್ಞಾನಿಕ ವಿಶ್ಲೇಷಣೆಯ ಹಿಂದೆ ನಾವು ದೃಢವಾಗಿ ನಿಂತಿದ್ದೇವೆ’ ಎಂದು ಹೇಳಿಕೊಂಡಿತ್ತು. ಕಂಪನಿಯ ವಿರುದ್ಧ ಹೋರಾಟ ನಡೆಸುತ್ತಿರುವ ವುಮೆನ್ಸ್ ವಾಯ್ಸ್ ಫಾರ್ ದಿ ಅರ್ಥ್ ಸಂಘಟನೆಯ ಕಾನೂನು ಸಲಹೆಗಾರ್ತಿ ಅಲೆಕ್ಸಾ ಸ್ಕ್ರಾಂಟನ್ ‘ಇದು ಯಾವುದೇ ರೀತಿಯ ಪರಿಹಾರವಲ್ಲ’ ಎಂದು ಅಭಿಪ್ರಾಯಪಟ್ಟಿದ್ದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…