ದೇಶ- ವಿದೇಶ

ಜಾನ್ಸನ್ಸ್‌ ಬೇಬಿ ಪೌಡರ್ ಇತಿಹಾಸದ ಪುಟಕ್ಕೆ

ನ್ಯೂಯಾರ್ಕ್: ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ಉತ್ಪಾದಿಸುವ ಬೇಬಿ ಪೌಡರ್ ಮಾರಾಟವನ್ನು ಜಾಗತಿಕವಾಗಿ ೨೦೨೩ರಿಂದ ನಿಲ್ಲಿಸಲು ನಿರ್ಧರಿಸಿದೆ. ಗ್ರಾಹಕರಿಂದ ಸುಮಾರು ಸಾವಿರಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಂಪನಿ ಈ ನಿರ್ಧಾರ ತಳೆದಿದೆ ಎಂದು ಅಮೆರಿಕದ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ೨೦೨೦ರಲ್ಲಿ ಉತ್ತರ ಅಮೆರಿಕದಲ್ಲಿ ಬೇಬಿ ಪೌಡರ್ ಮಾರಾಟವನ್ನು ಸ್ಥಗಿತಗೊಳಿಸಿತ್ತು. ಇದೀಗ ಇಡೀ ವಿಶ್ವದಾದ್ಯಂತ ಉತ್ಪನ್ನ ಮಾರಾಟ ಸ್ಥಗಿತಗೊಳಿಸುವುದಾಗಿ ಕಂಪನಿ ತಿಳಿಸಿದೆ. ಬೇಬಿ ಪೌಡರ್ ಕ್ಯಾನ್ಸರ್‌ಕಾರಕ ಅಂಶಗಳನ್ನು ಹೊಂದಿದೆ ಎಂಬ ಆರೋಪದಡಿ ಇದುವರೆಗೆ ೪೦ ಸಾವಿರಕ್ಕೂ ಅಧಿಕ ಗ್ರಾಹಕರು ದೂರು ಸಲ್ಲಿಸಿ ಕಾನೂನು ಸಂಘರ್ಷ ಹೂಡಿದ್ದರು.

ಆದಾಗ್ಯೂ ಕಂಪನಿಯು ‘ಟಾಲ್ಕ್ ಆಧಾರಿತ ಜಾನ್ಸನ್ಸ್ ಬೇಬಿ ಪೌಡರ್ ಸುರಕ್ಷಿತವಾಗಿದೆ, ಕಲ್ನಾರು ಹೊಂದಿರುವುದಿಲ್ಲ ಮತ್ತು ಕ್ಯಾನ್ಸರ್‌ಗೆ ಕಾರಣವಾಗುವುದಿಲ್ಲ ಎಂದು ದೃಢಪಡಿಸುವ ವಿಶ್ವದ ವೈದ್ಯಕೀಯ ತಜ್ಞರು ದಶಕಗಳ ಕಾಲ ನಡೆಸಿದ ಸ್ವತಂತ್ರ ವೈಜ್ಞಾನಿಕ ವಿಶ್ಲೇಷಣೆಯ ಹಿಂದೆ ನಾವು ದೃಢವಾಗಿ ನಿಂತಿದ್ದೇವೆ’ ಎಂದು ಹೇಳಿಕೊಂಡಿತ್ತು. ಕಂಪನಿಯ ವಿರುದ್ಧ ಹೋರಾಟ ನಡೆಸುತ್ತಿರುವ ವುಮೆನ್ಸ್ ವಾಯ್ಸ್ ಫಾರ್ ದಿ ಅರ್ಥ್ ಸಂಘಟನೆಯ ಕಾನೂನು ಸಲಹೆಗಾರ್ತಿ ಅಲೆಕ್ಸಾ ಸ್ಕ್ರಾಂಟನ್ ‘ಇದು ಯಾವುದೇ ರೀತಿಯ ಪರಿಹಾರವಲ್ಲ’ ಎಂದು ಅಭಿಪ್ರಾಯಪಟ್ಟಿದ್ದರು.

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

10 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

11 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

11 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

11 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

12 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

20 hours ago