ದೇಶ- ವಿದೇಶ

ಪುಲ್ವಾಮಾ ದಾಳಿಗೆ 6 ವರ್ಷ: ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ನಮನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಉಗ್ರರು ನಡೆಸಿದ್ದ ದಾಳಿ ಇಂದಿಗೆ 6 ವರ್ಷಗಳು ಕಳೆದಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ನಮನ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ೨೦೧೯ರಲ್ಲಿ ನಡೆದ ಭೀಕರ ದಾಳಿಯಲ್ಲಿ ಧೈರ್ಯಶಾಲಿ ೪೦ ಯೋಧರನ್ನು ಕಳೆದುಕೊಂಡಿದ್ದೇವೆ. ನಮ್ಮ ದೇಶ ಈ ಯೋಧರ ತ್ಯಾಗ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ವಿನಮ್ರ ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ನಮ್ಮ ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ರಾಜನಾಥ್‌ ಸಿಂಗ್‌

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ೨೦೧೯ರ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾರತವು ಧೈರ್ಯಶಾಲಿ ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ಕಳೆದುಕೊಂಡಿತು. ದೇಶಕ್ಕಾಗಿ ಯೋಧರು ಮಾಡಿದ ತ್ಯಾಗವನ್ನು ನಾವು ಎಂದಿಗೂ ಮರೆಯಲಾಗುವುದಿಲ್ಲ. ಹೀಗಾಗಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುತ್ತೇನೆ. ಅಲ್ಲದೇ ಹುತಾತ್ಮ ಯೋಧರ ಕುಟುಂಬದೊಂದಿಗೆ ನಮ್ಮ ಸರ್ಕಾರ ಯಾವಾಗಲೂ ಅವರೊಂದಿಗೆ ಇರುತ್ತದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ದೃಢ ನಿಶ್ಚಯದಿಂದ ಇದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪುಲ್ವಾಮ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ರಾಷ್ಟ್ರ ರಕ್ಷಣೆಯ ಮಹತ್ ಕಾರ್ಯದಲ್ಲಿ ಹುತಾತ್ಮರಾದ ಎಲ್ಲಾ ವೀರಯೋಧರ ತ್ಯಾಗ – ಬಲಿದಾನವನ್ನು ಸ್ಮರಿಸುತ್ತಾ, ನನ್ನ ಗೌರವ ನಮನ ಅರ್ಪಿಸುತ್ತೇನೆ ಎಂದು ನಮನ ಸಲ್ಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಭಾರತೀಯರು ಎಂದೂ ಮರೆಯಲಾರದ ಕರಾಳ ದಿನ ‘ಪುಲ್ವಾಮಾ ದಾಳಿ ಹುತಾತ್ಮರ ಸಂಸ್ಮರಣಾ ದಿನ’. ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು. ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ ಎಂದು ತಿಳಿಸಿದ್ದಾರೆ.

ಆರ್‌.ಅಶೋಕ್‌

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು, ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು. ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago