Mysore
29
light rain

Social Media

ಶುಕ್ರವಾರ, 31 ಜುಲೈ 2026
Light
Dark

ಕಳ್ಳಭಟ್ಟಿ ಸೇವಿಸಿ 10 ಮಂದಿ ಸಾವು

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ.

ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ರಮ ಕಳ್ಳಭಟ್ಟಿ ಮಾರುತ್ತಿದ್ದ ಕೆ.ಕುನ್ನುಕುಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನಿಂದ ಸುಮಾರು 200 ಲೀಟರ್‌ ಅಕ್ರಮ ಕಳ್ಳಭಟ್ಟಿಯಲ್ಲಿ ಮಾರಣಾಂತಿಕ ಮೆಥನಾಲ್‌ ಇರುವಿಕೆಯನ್ನು ಬಹಿರಂಗಪಡಿಸಿದೆ ಎಂದು ಸರ್ಕಾರ ತಿಳಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಈ ಬಗ್ಗೆ ಸಮಗ್ರ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

Tags:
error: Content is protected !!