ದೇಶ- ವಿದೇಶ

ಅನುಸೂಚಿತ ಜಿಲ್ಲೆಗಳ ಶಿಕ್ಷಕರಿಗೆ ಶೇ 100 ಮೀಸಲಾತಿ ಅಸಾಂವಿಧಾನಿಕ, ಶಿಕ್ಷಣದ ಗುಣಮಟ್ಟದಲ್ಲಿ ರಾಜಿ: ಸುಪ್ರೀಂ ಕೋರ್ಟ್

ನವದೆಹಲಿ: ಅನುಸೂಚಿತ ಜಿಲ್ಲೆಗಳು/ ಪ್ರದೇಶದ ಶಿಕ್ಷಕರಿಗೆ ಶೇ 100ರಷ್ಟು ಮೀಸಲಾತಿ ಒದಗಿಸುವುದು ಅಸಾಂವಿಧಾನಿಕವಾಗಿದ್ದು ಇದರಿಂದ ಶಿಕ್ಷಣ ಗುಣಮಟ್ಟದಲ್ಲಿ ರಾಜಿಯಾದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ

ಹೀಗಾಗಿ ಜಾರ್ಖಂಡ್‌ನ 13 ಅನುಸೂಚಿತ ಪ್ರದೇಶಗಳ ನಿವಾಸಿಗಳಿಗೆ ಶೇ 100 ಮೀಸಲಾತಿ ಒದಗಿಸಿ ರಾಜ್ಯ ಸರ್ಕಾರ 2016ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ರದ್ದುಗೊಳಿಸಿ ಜಾರ್ಖಂಡ್ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ನೀಡಿದ್ದ ತೀರ್ಪನ್ನು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠ ಎತ್ತಿಹಿಡಿದಿದೆ.

“ಆಯಾ ಅಥವಾ ಕೆಲವು ಜಿಲ್ಲೆಗಳ ಶಿಕ್ಷಕರ ಪರವಾಗಿ 100% ಮೀಸಲಾತಿ ನೀಡುವ ಮೂಲಕ ಮತ್ತು ಹೆಚ್ಚು ಅರ್ಹ ಶಿಕ್ಷಕರ ನೇಮಕಾತಿ ನಿಷೇಧಿಸುವ ಮೂಲಕ ಶಾಲೆಗೆ ಹೋಗುವ ಮಕ್ಕಳ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲಾಗದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈಗಾಗಲೇ ಇಂದ್ರ ಸಾಹ್ನಿ ಮತ್ತು ಚೀಬ್ರೋಲು ರಾವ್‌ ಪ್ರತ್ಯೇಕ ಪ್ರಕರಣಗಳಲ್ಲಿ ಈ ಕುರಿತಾದ ಕಾನೂನನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಶೇ 100ರಷ್ಟು ಮೀಸಲಾತಿ ಒದಗಿಸುವುದು ತಾರತಮ್ಯದಿಂದ ಕೂಡಿದ್ದು ಇದನ್ನು ಅನುಮತಿಸಲಾಗದು ಎಂದು ಸರ್ವೋಚ್ಚ ನ್ಯಾಯಾಲಯ ವಿವರಿಸಿದೆ.

ಮುಂದುವರೆದು “ಸಾರ್ವಜನಿಕ ಉದ್ಯೋಗದ ಅವಕಾಶವನ್ನು ಆಕಾಂಕ್ಷಿಗಳಿಗೆ ಅನ್ಯಾಯುತವಾಗಿ ನಿರಾಕರಿಸಲಾಗದು. ಇದು ಕೆಲವರ ವಿಶೇಷ ಹಕ್ಕಲ್ಲ. ನಾಗರಿಕರಿಗೆ ಸಮಾನ ಹಕ್ಕುಗಳಿವೆ. ಒಂದು ವರ್ಗಕ್ಕೆ ಹೆಚ್ಚು ಅವಕಾಶ ನೀಡಿ ಉಳಿದವರನ್ನು ಸಂಪೂರ್ಣವಾಗಿ ಹೊರಗಿಡುವುದನ್ನು ಸಂವಿಧಾನದ ಪಿತಾಮಹರು ಆಲೋಚಿಸಿರಲಿಲ್ಲ” ಎಂದು ಪೀಠ ತಿಳಿಸಿತು.

 

andolana

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

1 hour ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

1 hour ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

2 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

14 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

16 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

17 hours ago