ದೇಶ- ವಿದೇಶ

ಅನುಸೂಚಿತ ಜಿಲ್ಲೆಗಳ ಶಿಕ್ಷಕರಿಗೆ ಶೇ 100 ಮೀಸಲಾತಿ ಅಸಾಂವಿಧಾನಿಕ, ಶಿಕ್ಷಣದ ಗುಣಮಟ್ಟದಲ್ಲಿ ರಾಜಿ: ಸುಪ್ರೀಂ ಕೋರ್ಟ್

ನವದೆಹಲಿ: ಅನುಸೂಚಿತ ಜಿಲ್ಲೆಗಳು/ ಪ್ರದೇಶದ ಶಿಕ್ಷಕರಿಗೆ ಶೇ 100ರಷ್ಟು ಮೀಸಲಾತಿ ಒದಗಿಸುವುದು ಅಸಾಂವಿಧಾನಿಕವಾಗಿದ್ದು ಇದರಿಂದ ಶಿಕ್ಷಣ ಗುಣಮಟ್ಟದಲ್ಲಿ ರಾಜಿಯಾದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ

ಹೀಗಾಗಿ ಜಾರ್ಖಂಡ್‌ನ 13 ಅನುಸೂಚಿತ ಪ್ರದೇಶಗಳ ನಿವಾಸಿಗಳಿಗೆ ಶೇ 100 ಮೀಸಲಾತಿ ಒದಗಿಸಿ ರಾಜ್ಯ ಸರ್ಕಾರ 2016ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ರದ್ದುಗೊಳಿಸಿ ಜಾರ್ಖಂಡ್ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ನೀಡಿದ್ದ ತೀರ್ಪನ್ನು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠ ಎತ್ತಿಹಿಡಿದಿದೆ.

“ಆಯಾ ಅಥವಾ ಕೆಲವು ಜಿಲ್ಲೆಗಳ ಶಿಕ್ಷಕರ ಪರವಾಗಿ 100% ಮೀಸಲಾತಿ ನೀಡುವ ಮೂಲಕ ಮತ್ತು ಹೆಚ್ಚು ಅರ್ಹ ಶಿಕ್ಷಕರ ನೇಮಕಾತಿ ನಿಷೇಧಿಸುವ ಮೂಲಕ ಶಾಲೆಗೆ ಹೋಗುವ ಮಕ್ಕಳ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲಾಗದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈಗಾಗಲೇ ಇಂದ್ರ ಸಾಹ್ನಿ ಮತ್ತು ಚೀಬ್ರೋಲು ರಾವ್‌ ಪ್ರತ್ಯೇಕ ಪ್ರಕರಣಗಳಲ್ಲಿ ಈ ಕುರಿತಾದ ಕಾನೂನನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಶೇ 100ರಷ್ಟು ಮೀಸಲಾತಿ ಒದಗಿಸುವುದು ತಾರತಮ್ಯದಿಂದ ಕೂಡಿದ್ದು ಇದನ್ನು ಅನುಮತಿಸಲಾಗದು ಎಂದು ಸರ್ವೋಚ್ಚ ನ್ಯಾಯಾಲಯ ವಿವರಿಸಿದೆ.

ಮುಂದುವರೆದು “ಸಾರ್ವಜನಿಕ ಉದ್ಯೋಗದ ಅವಕಾಶವನ್ನು ಆಕಾಂಕ್ಷಿಗಳಿಗೆ ಅನ್ಯಾಯುತವಾಗಿ ನಿರಾಕರಿಸಲಾಗದು. ಇದು ಕೆಲವರ ವಿಶೇಷ ಹಕ್ಕಲ್ಲ. ನಾಗರಿಕರಿಗೆ ಸಮಾನ ಹಕ್ಕುಗಳಿವೆ. ಒಂದು ವರ್ಗಕ್ಕೆ ಹೆಚ್ಚು ಅವಕಾಶ ನೀಡಿ ಉಳಿದವರನ್ನು ಸಂಪೂರ್ಣವಾಗಿ ಹೊರಗಿಡುವುದನ್ನು ಸಂವಿಧಾನದ ಪಿತಾಮಹರು ಆಲೋಚಿಸಿರಲಿಲ್ಲ” ಎಂದು ಪೀಠ ತಿಳಿಸಿತು.

 

andolana

Recent Posts

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

53 mins ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

4 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

8 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

12 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

12 hours ago