ನವದೆಹಲಿ: ಅನುಸೂಚಿತ ಜಿಲ್ಲೆಗಳು/ ಪ್ರದೇಶದ ಶಿಕ್ಷಕರಿಗೆ ಶೇ 100ರಷ್ಟು ಮೀಸಲಾತಿ ಒದಗಿಸುವುದು ಅಸಾಂವಿಧಾನಿಕವಾಗಿದ್ದು ಇದರಿಂದ ಶಿಕ್ಷಣ ಗುಣಮಟ್ಟದಲ್ಲಿ ರಾಜಿಯಾದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ
ಹೀಗಾಗಿ ಜಾರ್ಖಂಡ್ನ 13 ಅನುಸೂಚಿತ ಪ್ರದೇಶಗಳ ನಿವಾಸಿಗಳಿಗೆ ಶೇ 100 ಮೀಸಲಾತಿ ಒದಗಿಸಿ ರಾಜ್ಯ ಸರ್ಕಾರ 2016ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ರದ್ದುಗೊಳಿಸಿ ಜಾರ್ಖಂಡ್ ಹೈಕೋರ್ಟ್ 2020ರ ಸೆಪ್ಟೆಂಬರ್ನಲ್ಲಿ ನೀಡಿದ್ದ ತೀರ್ಪನ್ನು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠ ಎತ್ತಿಹಿಡಿದಿದೆ.
“ಆಯಾ ಅಥವಾ ಕೆಲವು ಜಿಲ್ಲೆಗಳ ಶಿಕ್ಷಕರ ಪರವಾಗಿ 100% ಮೀಸಲಾತಿ ನೀಡುವ ಮೂಲಕ ಮತ್ತು ಹೆಚ್ಚು ಅರ್ಹ ಶಿಕ್ಷಕರ ನೇಮಕಾತಿ ನಿಷೇಧಿಸುವ ಮೂಲಕ ಶಾಲೆಗೆ ಹೋಗುವ ಮಕ್ಕಳ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲಾಗದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈಗಾಗಲೇ ಇಂದ್ರ ಸಾಹ್ನಿ ಮತ್ತು ಚೀಬ್ರೋಲು ರಾವ್ ಪ್ರತ್ಯೇಕ ಪ್ರಕರಣಗಳಲ್ಲಿ ಈ ಕುರಿತಾದ ಕಾನೂನನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಶೇ 100ರಷ್ಟು ಮೀಸಲಾತಿ ಒದಗಿಸುವುದು ತಾರತಮ್ಯದಿಂದ ಕೂಡಿದ್ದು ಇದನ್ನು ಅನುಮತಿಸಲಾಗದು ಎಂದು ಸರ್ವೋಚ್ಚ ನ್ಯಾಯಾಲಯ ವಿವರಿಸಿದೆ.
ಮುಂದುವರೆದು “ಸಾರ್ವಜನಿಕ ಉದ್ಯೋಗದ ಅವಕಾಶವನ್ನು ಆಕಾಂಕ್ಷಿಗಳಿಗೆ ಅನ್ಯಾಯುತವಾಗಿ ನಿರಾಕರಿಸಲಾಗದು. ಇದು ಕೆಲವರ ವಿಶೇಷ ಹಕ್ಕಲ್ಲ. ನಾಗರಿಕರಿಗೆ ಸಮಾನ ಹಕ್ಕುಗಳಿವೆ. ಒಂದು ವರ್ಗಕ್ಕೆ ಹೆಚ್ಚು ಅವಕಾಶ ನೀಡಿ ಉಳಿದವರನ್ನು ಸಂಪೂರ್ಣವಾಗಿ ಹೊರಗಿಡುವುದನ್ನು ಸಂವಿಧಾನದ ಪಿತಾಮಹರು ಆಲೋಚಿಸಿರಲಿಲ್ಲ” ಎಂದು ಪೀಠ ತಿಳಿಸಿತು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…