ದೇಶ- ವಿದೇಶ

ಅನುಸೂಚಿತ ಜಿಲ್ಲೆಗಳ ಶಿಕ್ಷಕರಿಗೆ ಶೇ 100 ಮೀಸಲಾತಿ ಅಸಾಂವಿಧಾನಿಕ, ಶಿಕ್ಷಣದ ಗುಣಮಟ್ಟದಲ್ಲಿ ರಾಜಿ: ಸುಪ್ರೀಂ ಕೋರ್ಟ್

ನವದೆಹಲಿ: ಅನುಸೂಚಿತ ಜಿಲ್ಲೆಗಳು/ ಪ್ರದೇಶದ ಶಿಕ್ಷಕರಿಗೆ ಶೇ 100ರಷ್ಟು ಮೀಸಲಾತಿ ಒದಗಿಸುವುದು ಅಸಾಂವಿಧಾನಿಕವಾಗಿದ್ದು ಇದರಿಂದ ಶಿಕ್ಷಣ ಗುಣಮಟ್ಟದಲ್ಲಿ ರಾಜಿಯಾದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ

ಹೀಗಾಗಿ ಜಾರ್ಖಂಡ್‌ನ 13 ಅನುಸೂಚಿತ ಪ್ರದೇಶಗಳ ನಿವಾಸಿಗಳಿಗೆ ಶೇ 100 ಮೀಸಲಾತಿ ಒದಗಿಸಿ ರಾಜ್ಯ ಸರ್ಕಾರ 2016ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ರದ್ದುಗೊಳಿಸಿ ಜಾರ್ಖಂಡ್ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ನೀಡಿದ್ದ ತೀರ್ಪನ್ನು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠ ಎತ್ತಿಹಿಡಿದಿದೆ.

“ಆಯಾ ಅಥವಾ ಕೆಲವು ಜಿಲ್ಲೆಗಳ ಶಿಕ್ಷಕರ ಪರವಾಗಿ 100% ಮೀಸಲಾತಿ ನೀಡುವ ಮೂಲಕ ಮತ್ತು ಹೆಚ್ಚು ಅರ್ಹ ಶಿಕ್ಷಕರ ನೇಮಕಾತಿ ನಿಷೇಧಿಸುವ ಮೂಲಕ ಶಾಲೆಗೆ ಹೋಗುವ ಮಕ್ಕಳ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲಾಗದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈಗಾಗಲೇ ಇಂದ್ರ ಸಾಹ್ನಿ ಮತ್ತು ಚೀಬ್ರೋಲು ರಾವ್‌ ಪ್ರತ್ಯೇಕ ಪ್ರಕರಣಗಳಲ್ಲಿ ಈ ಕುರಿತಾದ ಕಾನೂನನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಶೇ 100ರಷ್ಟು ಮೀಸಲಾತಿ ಒದಗಿಸುವುದು ತಾರತಮ್ಯದಿಂದ ಕೂಡಿದ್ದು ಇದನ್ನು ಅನುಮತಿಸಲಾಗದು ಎಂದು ಸರ್ವೋಚ್ಚ ನ್ಯಾಯಾಲಯ ವಿವರಿಸಿದೆ.

ಮುಂದುವರೆದು “ಸಾರ್ವಜನಿಕ ಉದ್ಯೋಗದ ಅವಕಾಶವನ್ನು ಆಕಾಂಕ್ಷಿಗಳಿಗೆ ಅನ್ಯಾಯುತವಾಗಿ ನಿರಾಕರಿಸಲಾಗದು. ಇದು ಕೆಲವರ ವಿಶೇಷ ಹಕ್ಕಲ್ಲ. ನಾಗರಿಕರಿಗೆ ಸಮಾನ ಹಕ್ಕುಗಳಿವೆ. ಒಂದು ವರ್ಗಕ್ಕೆ ಹೆಚ್ಚು ಅವಕಾಶ ನೀಡಿ ಉಳಿದವರನ್ನು ಸಂಪೂರ್ಣವಾಗಿ ಹೊರಗಿಡುವುದನ್ನು ಸಂವಿಧಾನದ ಪಿತಾಮಹರು ಆಲೋಚಿಸಿರಲಿಲ್ಲ” ಎಂದು ಪೀಠ ತಿಳಿಸಿತು.

 

andolana

Recent Posts

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

1 hour ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

2 hours ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

3 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

9 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

9 hours ago