ದೇಶ- ವಿದೇಶ

ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದರೆ 11 ಲಕ್ಷ ರೂ. ಬಹುಮಾನ: ಶಾಸಕ ಸಂಜಯ್‌ ಗಾಯಕ್ವಾಡ್‌ ಘೋಷಣೆ

ನವದೆಹಲಿ: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ರದ್ದುಪಡಿಸಸುವುದಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ ರಾಹುಲ್‌ ಅವರ ನಾಲಿಗೆಯನ್ನು ಕತ್ತರಿಸಿದರೆ 11 ಲಕ್ಷ ರೂ.ಬಹುಮಾನ ನೀಡುತ್ತೇನೆ ಎಂದು ಬುಲ್ದಾನ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್‌ ಗಾಯಕ್ವಾಡ್‌ ಘೋಷಿಸಿದ್ದಾರೆ.

ಮೀಸಲಾತಿ ಬಗ್ಗೆ ರಾಹುಲ್‌ ನೀಡಿರುವ ಹೇಳಿಕೆಯೂ ಕಾಂಗ್ರೆಸ್‌ನ ಸತ್ಯ ಮುಖವನ್ನು ಬಹಿರಂಗಪಡಿಸಿದಂತಿದೆ ಎಂದು ಸೋಮವಾರ ಆರೋಪಿಸಿದ್ದಾರೆ.

ಬಿಜೆಪಿಯಿಂದ ಸಂವಿಧಾನಕ್ಕೆ ಅಪಾಯವಿದ್ದು, ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಲೋಕ ಚುನಾವಣೆಯಲ್ಲಿ ಕಾಂಗ್ರಸ್‌ ಮತ ಪಡಿದಿದೆ. ಆದರೆ, ಅಮೆರಿಕಾದಲ್ಲಿ ರಾಹುಲ್‌ ಅವರು ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ರಾಹುಲ್‌ ಅವರ ಬಾಯಿಂದ ಈ ಮಾತನ್ನು ನೀರೀಕ್ಷಿಸರಿರಲಿಲ್ಲ ಎಂದು ಬೇಸರ ಅವರು ವ್ಯಕ್ತಪಡಿಸಿದರು.

ರಾಗಾ ಅಮೆರಿಕಾದಲ್ಲಿ ಹೇಳಿರುವುದೇನು..?
ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಅವರು, ಭಾರತದಲ್ಲಿ ಸಮಾನತೆಯ ಸ್ಥಿತಿ ನೋಡಿದ ನಂತರ ಮುಂದಿನ ದಿನಗಳಲ್ಲಿ ಮೀಸಲಾತಿ ರದ್ದತಿ ಕುರಿತು ಕಾಂಗ್ರೆಸ್ ಚಿಂತಿಸಲಿದೆ ಎಂದು ಹೇಳಿದ್ದಾಗಿ ವರದಿಯಾಗಿತ್ತು. ಬಳಿಕ ರಾಹುಲ್‌ ಅವರು ಮಾಧ್ಯಮ ಸಂವಾದದಲ್ಲಿ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಿದ್ದಾರೆ. ಆದರೆ ನಾನು ಶೇ.50 ರಷ್ಟು ಮೀರಿ ಮೀಸಲಾತಿಯನ್ನು ವಿಸ್ತರಿಸಲಿದ್ದೇವೆ ಎಂದು ಹೇಳಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

6 mins ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

9 mins ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

33 mins ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

46 mins ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

59 mins ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

1 hour ago