ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಮೀಸಲಾತಿ ರದ್ದುಪಡಿಸಸುವುದಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ ರಾಹುಲ್ ಅವರ ನಾಲಿಗೆಯನ್ನು ಕತ್ತರಿಸಿದರೆ 11 ಲಕ್ಷ ರೂ.ಬಹುಮಾನ ನೀಡುತ್ತೇನೆ ಎಂದು ಬುಲ್ದಾನ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಘೋಷಿಸಿದ್ದಾರೆ.
ಮೀಸಲಾತಿ ಬಗ್ಗೆ ರಾಹುಲ್ ನೀಡಿರುವ ಹೇಳಿಕೆಯೂ ಕಾಂಗ್ರೆಸ್ನ ಸತ್ಯ ಮುಖವನ್ನು ಬಹಿರಂಗಪಡಿಸಿದಂತಿದೆ ಎಂದು ಸೋಮವಾರ ಆರೋಪಿಸಿದ್ದಾರೆ.
ಬಿಜೆಪಿಯಿಂದ ಸಂವಿಧಾನಕ್ಕೆ ಅಪಾಯವಿದ್ದು, ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಲೋಕ ಚುನಾವಣೆಯಲ್ಲಿ ಕಾಂಗ್ರಸ್ ಮತ ಪಡಿದಿದೆ. ಆದರೆ, ಅಮೆರಿಕಾದಲ್ಲಿ ರಾಹುಲ್ ಅವರು ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ರಾಹುಲ್ ಅವರ ಬಾಯಿಂದ ಈ ಮಾತನ್ನು ನೀರೀಕ್ಷಿಸರಿರಲಿಲ್ಲ ಎಂದು ಬೇಸರ ಅವರು ವ್ಯಕ್ತಪಡಿಸಿದರು.
ರಾಗಾ ಅಮೆರಿಕಾದಲ್ಲಿ ಹೇಳಿರುವುದೇನು..?
ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು, ಭಾರತದಲ್ಲಿ ಸಮಾನತೆಯ ಸ್ಥಿತಿ ನೋಡಿದ ನಂತರ ಮುಂದಿನ ದಿನಗಳಲ್ಲಿ ಮೀಸಲಾತಿ ರದ್ದತಿ ಕುರಿತು ಕಾಂಗ್ರೆಸ್ ಚಿಂತಿಸಲಿದೆ ಎಂದು ಹೇಳಿದ್ದಾಗಿ ವರದಿಯಾಗಿತ್ತು. ಬಳಿಕ ರಾಹುಲ್ ಅವರು ಮಾಧ್ಯಮ ಸಂವಾದದಲ್ಲಿ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಿದ್ದಾರೆ. ಆದರೆ ನಾನು ಶೇ.50 ರಷ್ಟು ಮೀರಿ ಮೀಸಲಾತಿಯನ್ನು ವಿಸ್ತರಿಸಲಿದ್ದೇವೆ ಎಂದು ಹೇಳಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…