ದೇಶ- ವಿದೇಶ

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗಿದೆ.

ಭಾರತದ ಸ್ವಚ್ಛ ನಗರ ಎಂದು ಕರೆಯಲ್ಪಡುವ ಭೋಪಾಲ್‌ನಲ್ಲಿ ಇಂತಹ ದುರದೃಷ್ಟಕರ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಭಗೀರಥಪುರ ಪೊಲೀಸ್ ಹೊರಠಾಣೆ ಪಕ್ಕದಲ್ಲಿರುವ ಸಾರ್ವಜನಿಕ ಶೌಚಾಲಯದ ಬಳಿಯ ಮುಖ್ಯ ಕುಡಿಯುವ ನೀರಿನ ಪೈಪ್‌ಲೈನ್‌ನಲ್ಲಿ ಕಲುಷಿತ ನೀರು ಸೋರಿಕೆಯಾಗಿ ಮಾಲಿನ್ಯ ಉಂಟಾಗಿದೆ ಎಂದು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಈ ಬಿರುಕು ಮೂಲಕ ಕೊಳಚೆ ನೀರು ಕುಡಿಯುವ ನೀರಿನ ಮಾರ್ಗವನ್ನು ಪ್ರವೇಶಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಸೋರಿಕೆಯಿಂದಾಗಿ ಮಾಲಿನ್ಯದ ಪುರಾವೆಗಳು ಕಂಡುಬಂದಿವೆ ಎಂದು ದೃಢಪಡಿಸಿದರು ಮತ್ತು ಅಂತಹ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದರು.

ನಗರಾಡಳಿತ ಸಚಿವ ಕೈಲಾಶ್ ವಿಜಯವರ್ಗೀಯಾ ಅವರು ಕುಡಿಯುವ ನೀರಿನಲ್ಲಿ ಕೊಳಚೆ ನೀರು ಮಿಶ್ರಣವಾಗುವುದು ಸಂಭವನೀಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ. ಆರೋಗ್ಯ ಇಲಾಖೆಯ ವರದಿಗಳು ಇದನ್ನು ದೃಢಪಡಿಸಿವೆ. ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಮಾಧವ್ ಹಸಾನಿ ಅವರು ಎಂಜಿಎಂ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷಿಸಿದ ನೀರಿನ ಮಾದರಿಗಳು ಭಾಗೀರಥಪುರದ ನಿವಾಸಿಗಳು ಕಲುಷಿತ ನೀರನ್ನು ಸೇವಿಸಿ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ ಎಂದು ಹೇಳಿದರು.

ರಾಹುಲ್‌ ಗಾಂಧಿ ಕಿಡಿ
ಕಲುಷಿತ ನೀರು ಕುಡಿದು 11 ಮಂದಿ ಮೃತಪಟ್ಟಿರುವ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೆಲ ದಿನಗಳ ಹಿಂದೆ ಕೆಮ್ಮಿನ ಸಿರಪ್‌ನಿಂದ ಹಲವರು ಸತ್ತರು. ಬಳಿಕ ಆಸ್ಪತ್ರೆಯಲ್ಲಿ ಇಲಿ ಕಚ್ಚಿ ಶಿಶುಗಳ ಸಾವು ಸಂಭವಿಸಿತು. ಇದೀಗ ಕೊಳಚೆ ನೀರು ಕುಡಿದು ಜನರು ಸಾಯುತ್ತಿದ್ದಾರೆ. ಹೀಗಿದ್ದರೂ ಬಡವರ ಸಾವಿಗೆ ಪ್ರಧಾನಿ ಮೋದಿ ಸದಾ ಮೌನ ವಹಿಸುತ್ತಾರೆ ಎಂದು ಕುಟುಕಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

3 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

4 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

5 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

6 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

10 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

10 hours ago