ಮಧ್ಯಪ್ರದೇಶದ ಉಜ್ಜಯಿನಿಯ ದೇವಸ್ಥಾನದಲ್ಲಿ ಇಂದು ( ಮಾರ್ಚ್ 25 ) ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅರ್ಚಕರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ದೇಶಾದ್ಯಂತ ಸಡಗರ-ಸಂಭ್ರಮದಿಂದ ಹೋಳಿ ಹಬ್ಬ ಆಚರಿಸಲಾಗುತ್ತಿದೆ. ಹೋಳಿ ಹಬ್ಬ ಹಿನ್ನಲೆ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ನಡೆಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಐವರು ಅರ್ಚಕರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ.
ದೇವಾಲಯ ಗರ್ಭಗುಡಿಯ ವರಾಂಡದಲ್ಲಿ ಭಸ್ಮ ಆರತಿ ಮಹಾಕಾಲ್ಗೆ ಗುಲಾಲ್ ಅರ್ಪಿಸುವ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಧೂಳೆಂದಿ ಎಂಬ ಕಾರಣಕ್ಕೆ ಗರ್ಭಗುಡಿಯಲ್ಲಿ ಕವರ್ ಹಾಕಲಾಗಿದ್ದು, ಅರ್ಚಕರು ಸೇರಿದಂತೆ ನೆರೆದಿದ್ದ ಭಕ್ತರಿಗೆ ಬೆಂಕಿ ತಗುಲಿದೆ ಎಂದು ಅರ್ಚಕ ಆಶಿಶ್ ಪೂಜಾರಿ ಹೇಳಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕ ಸಂಜಯ್ ಗುರು, ವಿಕಾಸ್ ಪೂಜಾರಿ, ಮನೋಜ್ ಪೂಜಾರಿ, ಅಂಶ್ ಪುರೋಹಿತ್, ಸೇವಕ ಮಹೇಶ್ ಶರ್ಮಾ ಹಾಗೂ ಚಿಂತಾಮನ್ ಗೆಹ್ಲೋಟ್ ಸೇರಿದಂತೆ ಹಲವು ಭಕ್ತರು ಗಾಯಗೊಂಡಿದ್ದಾರೆ.
ವಿಶ್ವವಿಖ್ಯಾತ ಜ್ಯೋತಿರ್ಲಿಂಗದ ಭಸ್ಮತಿ ನೋಡಲು ಸಿಎಂ ಮೋಹನ್ ಯಾದವ್ ಅವರ ಪುತ್ರ ಹಾಗೂ ಪುತ್ರಿ ಕೂಡ ದೇವಾಲಯಕ್ಕೆ ಹೋಗಿದ್ದು ಇಬ್ಬರೂ ಕೂಡ ಸುರಕ್ಷಿತವಾಗಿದ್ದಾರೆ.
ಘಟನೆಯ ಮಾಹಿತಿ ಲಭಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ನೀರಜ್ ಸಿಂಗ್, ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ಮಾಹಿತಿ ಪಡೆದುಕೊಂಡರು. ಜಗದ್ವಿಖ್ಯಾತ ಜ್ಯೋತಿರ್ಲಿಂಗ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸಾವಿರಾರು ಮಂದಿ ಭಕ್ತರು ಸೇರಿದ್ದರು. ಬೆಂಕಿ ಹೊತ್ತಿಕೊಂಡ ನಂತರ ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿಯನ್ನು ನಿಯಂತ್ರಿಸಿದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…