ದೇಶ- ವಿದೇಶ

ಉಜ್ಜಯಿನಿಯ ದೇವಸ್ಥಾನದಲ್ಲಿ ಅಗ್ನಿ ಅವಘಡ

ಮಧ್ಯಪ್ರದೇಶದ ಉಜ್ಜಯಿನಿಯ ದೇವಸ್ಥಾನದಲ್ಲಿ ಇಂದು ( ಮಾರ್ಚ್‌ 25 ) ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅರ್ಚಕರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ದೇಶಾದ್ಯಂತ ಸಡಗರ-ಸಂಭ್ರಮದಿಂದ ಹೋಳಿ ಹಬ್ಬ ಆಚರಿಸಲಾಗುತ್ತಿದೆ. ಹೋಳಿ ಹಬ್ಬ ಹಿನ್ನಲೆ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ನಡೆಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಐವರು ಅರ್ಚಕರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ.

ದೇವಾಲಯ ಗರ್ಭಗುಡಿಯ ವರಾಂಡದಲ್ಲಿ ಭಸ್ಮ ಆರತಿ ಮಹಾಕಾಲ್‌ಗೆ ಗುಲಾಲ್ ಅರ್ಪಿಸುವ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಧೂಳೆಂದಿ ಎಂಬ ಕಾರಣಕ್ಕೆ ಗರ್ಭಗುಡಿಯಲ್ಲಿ ಕವರ್ ಹಾಕಲಾಗಿದ್ದು, ಅರ್ಚಕರು ಸೇರಿದಂತೆ ನೆರೆದಿದ್ದ ಭಕ್ತರಿಗೆ ಬೆಂಕಿ ತಗುಲಿದೆ ಎಂದು ಅರ್ಚಕ ಆಶಿಶ್ ಪೂಜಾರಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕ ಸಂಜಯ್ ಗುರು, ವಿಕಾಸ್ ಪೂಜಾರಿ, ಮನೋಜ್ ಪೂಜಾರಿ, ಅಂಶ್ ಪುರೋಹಿತ್, ಸೇವಕ ಮಹೇಶ್ ಶರ್ಮಾ ಹಾಗೂ ಚಿಂತಾಮನ್ ಗೆಹ್ಲೋಟ್ ಸೇರಿದಂತೆ ಹಲವು ಭಕ್ತರು ಗಾಯಗೊಂಡಿದ್ದಾರೆ.

ವಿಶ್ವವಿಖ್ಯಾತ ಜ್ಯೋತಿರ್ಲಿಂಗದ ಭಸ್ಮತಿ ನೋಡಲು ಸಿಎಂ ಮೋಹನ್ ಯಾದವ್ ಅವರ ಪುತ್ರ ಹಾಗೂ ಪುತ್ರಿ ಕೂಡ ದೇವಾಲಯಕ್ಕೆ ಹೋಗಿದ್ದು ಇಬ್ಬರೂ ಕೂಡ ಸುರಕ್ಷಿತವಾಗಿದ್ದಾರೆ.

ಘಟನೆಯ ಮಾಹಿತಿ ಲಭಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ನೀರಜ್ ಸಿಂಗ್, ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ಮಾಹಿತಿ ಪಡೆದುಕೊಂಡರು. ಜಗದ್ವಿಖ್ಯಾತ ಜ್ಯೋತಿರ್ಲಿಂಗ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸಾವಿರಾರು ಮಂದಿ ಭಕ್ತರು ಸೇರಿದ್ದರು. ಬೆಂಕಿ ಹೊತ್ತಿಕೊಂಡ ನಂತರ ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿಯನ್ನು ನಿಯಂತ್ರಿಸಿದರು.

andolana

Recent Posts

ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸ: ಜಿಲ್ಲೆಯ 12 ಗ್ರಾಮಗಳಲ್ಲಿ ನಿಷೇಧಾಜ್ಞೆ

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ…

8 mins ago

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

1 hour ago

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

2 hours ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

2 hours ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

2 hours ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

2 hours ago