ಅಸ್ಸಾಂ: ಅಸ್ಸಾಂನಲ್ಲಿ ಮುಂಗಾರು ಭಾರೀ ಚುರುಕಾಗಿದ್ದು, ವಿಪರೀತ ಗಾಳಿ ಮಳೆ ಉಂಟಾಗಿದೆ. ವರುಣನ ಆರ್ಭಟಕ್ಕೆ ಇಡೀ ಅಸ್ಸಾಂ ಬೆಚ್ಚಿ ಬಿದ್ದಿದೆ.
ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ದೇಶದ ಪ್ರಮುಖ ಉದ್ಯಾನವನಗಲ್ಲಿ ಒಂದಾದ ಕಾಜಿರಂಗ ಉದ್ಯಾನವನ ಭಾಗಶಃ ಮುಳುಗಡೆಯಾಗಿದೆ. ಈ ಉದ್ಯಾನವನದಲ್ಲಿ ಕನಿಷ್ಠ 132 ಪ್ರಾಣಿಗಳು ಮರಣಹೊಂದಿದ್ದು, ಅದರಲ್ಲಿ 6 ಘೇಂಡಾಮೃಗ ಹಾಗೂ 117 ಜಿಂಕೆಗಳು ನಿಧನವಾಗಿದೆ ಎಂದು ಹೇಳಲಾಗಿದೆ. ಜತೆಗೆ 96 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಪೈಕಿ 98 ಪ್ರಾಣಿಗಳು ಜಲಾವೃತವಾಗಿ ಮರಣ ಹೊಂದಿದರೇ, 2 ಪ್ರಾಣಿಗಳು ವಾಹನದಲ್ಲಿ ಮೃತಪಟ್ಟಿವೆ. ಇನ್ನು 25 ಪ್ರಾಣಿಗಳು ಚಿಕಿತ್ಸೆ ಪಡೆಯುವಾಗ ಸಾವು ಕಂಡಿವೆ ಎಂದು ಹೇಳಲಾಗಿದೆ. ಇದರ ಜೊತೆಗೆ 25 ಪ್ರಾಣಿಗಳು ವೈದ್ಯಕೀಯ ಹಾರೈಕೆಯಲ್ಲಿವೆ ಎಂದು ತಿಳಿಸಿದೆ.
ಇದೇ ಅಸ್ಸಾಂನಲ್ಲಿ 2017ರಲ್ಲಿ ಸಂಭವಿಸಿದ ಭಾರೀ ಪ್ರವಾಹದಲ್ಲಿ 350ಕ್ಕೂ ಹೆಚ್ಚಿನ ಪ್ರಾಣಿಗಳು ಸಾವನ್ನಪ್ಪಿದ್ದವು. ಇದಾದ ಬಳಿಕ ಈಗ ಪ್ರವಾಹದಿಂದ ಪ್ರಾಣಿಗಳು ಸಾಯುತ್ತಿದ್ದು, ಪ್ರಾಣಿಗಳ ಮರಣ ಸಂಖ್ಯೆ 150ರ ಗಡಿ ತಲುಪಿದೆ.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…