ಮಣಿಪುರ: ಭದ್ರತಾ ಪಡೆಗಳ ಶಿಬಿರದ ಮೇಲೆ ಸಶಸ್ತ್ರಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶನಿವಾರ (ಏ.27) ಮುಂಜಾನೆ ನಡೆದಿದೆ.
ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಮಣಿಪುರದ ಪೊಲೀಸರು ಮಾಹಿತಿ ದೃಢಪಡಿಸಿದ್ದು, ಮೃತರನ್ನು ಸಿಆರ್ಪಿಎಫ್ ಸಬ್ ಇನ್ಸ್ಸ್ಪೆಕ್ಟರ್ ಎನ್.ಸರ್ಕಾರ್ ಮತ್ತು ಹೆಡ್ ಕಾನ್ಸ್ಟೆಬಲ್ ಅರೂಪ್ ಸೈನಿ ಎಂದು ಗುರುತಿಸಲಾಗಿದೆ. ಇನ್ನು ಇನ್ಸ್ಪೆಕ್ಟರ್ ಜಾದವ್ ದಾಸ್ ಮತ್ತು ಪೇದೆ ಅಫ್ತಾಬ್ ದಾಸ್ ಅವರು ಗಾಯಗೊಂಡಿರುವವರಾಗಿದ್ದಾರೆ.
ಐಆರ್ಬಿಎನ್ ಶಿಬಿರದ ಭದ್ರತೆಗಾಗಿ ಸಿಆರ್ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ವೇಳೆ ಸಶಸ್ತ್ರದಾರಿಗಳು ಭದ್ರತಾ ಪಡೆಗಳ ಶಿಬಿರವನ್ನು ಗುರಿಯಾಗಿಸಿಕೊಂಡು ಬೆಟ್ಟದ ತುದಿಯಿಂದ ನಾರಾಯಣಸೇನೆ ಎಂಬ ಹಳ್ಳಿಯ ಕಡೆಗೆ ನಿರಂತರ ಗುಂಡಿನ ದಾಳಿ ನಡೆಸಿದ್ದು, ಮಧ್ಯರಾತ್ರಿ 12.30 ರಿಂದ 2.15ರವರೆಗೆ ಗುಂಡಿನ ದಾಳಿ ಮುಂದುವರೆದಿದೆ. ಅಲ್ಲದೇ ಬಾಂಬ್ ದಾಳಿ ಕೂಡ ನಡೆಸಲಾಗಿದೆ. ಇದರಿಂದಾಗಿ ಸಿಆರ್ಪಿಎಫ್ನ ಬೆಟಾಲಿಯನ್ ಔಟ್ಪೋಸ್ಟ್ ಸ್ಟೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು…
ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…