ಮಣಿಪುರ: ಭದ್ರತಾ ಪಡೆಗಳ ಶಿಬಿರದ ಮೇಲೆ ಸಶಸ್ತ್ರಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶನಿವಾರ (ಏ.27) ಮುಂಜಾನೆ ನಡೆದಿದೆ.
ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಮಣಿಪುರದ ಪೊಲೀಸರು ಮಾಹಿತಿ ದೃಢಪಡಿಸಿದ್ದು, ಮೃತರನ್ನು ಸಿಆರ್ಪಿಎಫ್ ಸಬ್ ಇನ್ಸ್ಸ್ಪೆಕ್ಟರ್ ಎನ್.ಸರ್ಕಾರ್ ಮತ್ತು ಹೆಡ್ ಕಾನ್ಸ್ಟೆಬಲ್ ಅರೂಪ್ ಸೈನಿ ಎಂದು ಗುರುತಿಸಲಾಗಿದೆ. ಇನ್ನು ಇನ್ಸ್ಪೆಕ್ಟರ್ ಜಾದವ್ ದಾಸ್ ಮತ್ತು ಪೇದೆ ಅಫ್ತಾಬ್ ದಾಸ್ ಅವರು ಗಾಯಗೊಂಡಿರುವವರಾಗಿದ್ದಾರೆ.
ಐಆರ್ಬಿಎನ್ ಶಿಬಿರದ ಭದ್ರತೆಗಾಗಿ ಸಿಆರ್ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ವೇಳೆ ಸಶಸ್ತ್ರದಾರಿಗಳು ಭದ್ರತಾ ಪಡೆಗಳ ಶಿಬಿರವನ್ನು ಗುರಿಯಾಗಿಸಿಕೊಂಡು ಬೆಟ್ಟದ ತುದಿಯಿಂದ ನಾರಾಯಣಸೇನೆ ಎಂಬ ಹಳ್ಳಿಯ ಕಡೆಗೆ ನಿರಂತರ ಗುಂಡಿನ ದಾಳಿ ನಡೆಸಿದ್ದು, ಮಧ್ಯರಾತ್ರಿ 12.30 ರಿಂದ 2.15ರವರೆಗೆ ಗುಂಡಿನ ದಾಳಿ ಮುಂದುವರೆದಿದೆ. ಅಲ್ಲದೇ ಬಾಂಬ್ ದಾಳಿ ಕೂಡ ನಡೆಸಲಾಗಿದೆ. ಇದರಿಂದಾಗಿ ಸಿಆರ್ಪಿಎಫ್ನ ಬೆಟಾಲಿಯನ್ ಔಟ್ಪೋಸ್ಟ್ ಸ್ಟೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…