ಮಣಿಪುರ: ಭದ್ರತಾ ಪಡೆಗಳ ಶಿಬಿರದ ಮೇಲೆ ಸಶಸ್ತ್ರಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶನಿವಾರ (ಏ.27) ಮುಂಜಾನೆ ನಡೆದಿದೆ.
ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಮಣಿಪುರದ ಪೊಲೀಸರು ಮಾಹಿತಿ ದೃಢಪಡಿಸಿದ್ದು, ಮೃತರನ್ನು ಸಿಆರ್ಪಿಎಫ್ ಸಬ್ ಇನ್ಸ್ಸ್ಪೆಕ್ಟರ್ ಎನ್.ಸರ್ಕಾರ್ ಮತ್ತು ಹೆಡ್ ಕಾನ್ಸ್ಟೆಬಲ್ ಅರೂಪ್ ಸೈನಿ ಎಂದು ಗುರುತಿಸಲಾಗಿದೆ. ಇನ್ನು ಇನ್ಸ್ಪೆಕ್ಟರ್ ಜಾದವ್ ದಾಸ್ ಮತ್ತು ಪೇದೆ ಅಫ್ತಾಬ್ ದಾಸ್ ಅವರು ಗಾಯಗೊಂಡಿರುವವರಾಗಿದ್ದಾರೆ.
ಐಆರ್ಬಿಎನ್ ಶಿಬಿರದ ಭದ್ರತೆಗಾಗಿ ಸಿಆರ್ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ವೇಳೆ ಸಶಸ್ತ್ರದಾರಿಗಳು ಭದ್ರತಾ ಪಡೆಗಳ ಶಿಬಿರವನ್ನು ಗುರಿಯಾಗಿಸಿಕೊಂಡು ಬೆಟ್ಟದ ತುದಿಯಿಂದ ನಾರಾಯಣಸೇನೆ ಎಂಬ ಹಳ್ಳಿಯ ಕಡೆಗೆ ನಿರಂತರ ಗುಂಡಿನ ದಾಳಿ ನಡೆಸಿದ್ದು, ಮಧ್ಯರಾತ್ರಿ 12.30 ರಿಂದ 2.15ರವರೆಗೆ ಗುಂಡಿನ ದಾಳಿ ಮುಂದುವರೆದಿದೆ. ಅಲ್ಲದೇ ಬಾಂಬ್ ದಾಳಿ ಕೂಡ ನಡೆಸಲಾಗಿದೆ. ಇದರಿಂದಾಗಿ ಸಿಆರ್ಪಿಎಫ್ನ ಬೆಟಾಲಿಯನ್ ಔಟ್ಪೋಸ್ಟ್ ಸ್ಟೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…