ಮಣಿಪುರ: ಭದ್ರತಾ ಪಡೆಗಳ ಶಿಬಿರದ ಮೇಲೆ ಸಶಸ್ತ್ರಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶನಿವಾರ (ಏ.27) ಮುಂಜಾನೆ ನಡೆದಿದೆ.
ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಮಣಿಪುರದ ಪೊಲೀಸರು ಮಾಹಿತಿ ದೃಢಪಡಿಸಿದ್ದು, ಮೃತರನ್ನು ಸಿಆರ್ಪಿಎಫ್ ಸಬ್ ಇನ್ಸ್ಸ್ಪೆಕ್ಟರ್ ಎನ್.ಸರ್ಕಾರ್ ಮತ್ತು ಹೆಡ್ ಕಾನ್ಸ್ಟೆಬಲ್ ಅರೂಪ್ ಸೈನಿ ಎಂದು ಗುರುತಿಸಲಾಗಿದೆ. ಇನ್ನು ಇನ್ಸ್ಪೆಕ್ಟರ್ ಜಾದವ್ ದಾಸ್ ಮತ್ತು ಪೇದೆ ಅಫ್ತಾಬ್ ದಾಸ್ ಅವರು ಗಾಯಗೊಂಡಿರುವವರಾಗಿದ್ದಾರೆ.
ಐಆರ್ಬಿಎನ್ ಶಿಬಿರದ ಭದ್ರತೆಗಾಗಿ ಸಿಆರ್ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ವೇಳೆ ಸಶಸ್ತ್ರದಾರಿಗಳು ಭದ್ರತಾ ಪಡೆಗಳ ಶಿಬಿರವನ್ನು ಗುರಿಯಾಗಿಸಿಕೊಂಡು ಬೆಟ್ಟದ ತುದಿಯಿಂದ ನಾರಾಯಣಸೇನೆ ಎಂಬ ಹಳ್ಳಿಯ ಕಡೆಗೆ ನಿರಂತರ ಗುಂಡಿನ ದಾಳಿ ನಡೆಸಿದ್ದು, ಮಧ್ಯರಾತ್ರಿ 12.30 ರಿಂದ 2.15ರವರೆಗೆ ಗುಂಡಿನ ದಾಳಿ ಮುಂದುವರೆದಿದೆ. ಅಲ್ಲದೇ ಬಾಂಬ್ ದಾಳಿ ಕೂಡ ನಡೆಸಲಾಗಿದೆ. ಇದರಿಂದಾಗಿ ಸಿಆರ್ಪಿಎಫ್ನ ಬೆಟಾಲಿಯನ್ ಔಟ್ಪೋಸ್ಟ್ ಸ್ಟೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…