ನವದೆಹಲಿ: ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಸ್ತಾವನೆಯ ವೇಳೆ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಗೈರಾಗಿದ್ದ ಹಿನ್ನೆಲೆಯಲ್ಲಿ ಪಕ್ಷ ತನಿಖೆ ನಡೆಸಲು ಮುಂದಾಗಿದೆ.
ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ನಿನ್ನೆ ಸಂಸತ್ನಲ್ಲಿ ಮಂಡಿಸಲಾಗಿದ್ದು, ವಿಸ್ತೃತ ಚರ್ಚೆಗೆಂದು ಜಂಟಿ ಸದನ ಸಮಿತಿಗೆ ಶಿಫಾರಸು ಮಾಡಲಾಗಿದೆ.
ಮಸೂದೆಯ ಪ್ರಸ್ತಾವನೆಗೆ ಮತದಾನ ನಡೆದಿದ್ದು, ಮಸೂದೆ ಪರವಾಗಿ 269 ಮತಗಳು ಬಂದಿವೆ. ಮಸೂದೆಯ ವಿರುದ್ಧವಾಗಿ 198 ಮತಗಳು ಚಲಾವಣೆಯಾಗಿವೆ.
ಇನ್ನು ಅಚ್ಚರಿ ಎಂದರೆ ಎಲ್ಲಾ ಸಂಸದರಿಗೂ ವಿಪ್ ಜಾರಿಯಾಗಿದ್ದರೂ ಆಡಳಿತಾರೂಢ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಮತದಾನದ ವೇಳೆ ಗೈರು ಹಾಜರಾಗಿದ್ದರು.
ಒಂದು ದೇಶ ಒಂದು ಚುನಾವಣೆ ಮಸೂದೆ ವೇಳೆ ಸದನದಲ್ಲಿ ಎಲ್ಲರೂ ತಪ್ಪದೇ ಹಾಜರಿರಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿತ್ತು. ಆದರೆ 20ಕ್ಕೂ ಹೆಚ್ಚು ಬಿಜೆಪಿ ಸಂಸದರು ಗೈರಾಗುವ ಮೂಲಕ ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಈ ಮೂಲಕ ಸಂಸದರು ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಇನ್ನು ಹಲವು ಸಂಸದರು ವೈಯಕ್ತಿಕ ಮತ್ತು ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಗೈರುಹಾಜರಿಯ ಬಗ್ಗೆ ಮುಂಚಿತವಾಗಿ ತಿಳಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಬಿಜೆಪಿ ಮಿತ್ರ ಪಕ್ಷಗಳ ನಾಲ್ಕೈದು ಸಂಸದರೂ ಕೂಡ ಮತದಾನದ ವೇಳೆ ಹಾಜರಿರಲಿಲ್ಲ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತದೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ಇನ್ನು ನಿನ್ನೆ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮೇಘವಾಲ್ ಅವರು ಮತಗಳ ವಿಭಜನೆಯ ನಂತರ ಲೋಕಸಭೆಯಲ್ಲಿ ಮಂಡಿಸಿದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…