ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗುಡ್ನ್ಯೂಸ್ ನೀಡಿದೆ.
ಎಲ್ಪಿಜಿ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ರಾಜ್ಯಗಳಿಗೆ ಹೆಚ್ಚುವರಿಯಾಗಿ ವಾಣಿಜ್ಯ ಬಳಕೆಗೆ ಶೇ.20ರಷ್ಟು ಅನಿಲ ಹಂಚಿಕೆ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ. ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23ರಿಂದ ಇದು (ಸೋಮವಾರ) ಜಾರಿಗೆ ಬರಲಿದೆ.
ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಢಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.
ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ 5 ಕೆಜಿ ಸಣ್ಣ ಸಿಲಿಂಡರ್ ಒದಗಿಸುವ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಹೆಚ್ಚುವರಿ ಅನುದಾನವು ಕೇವಲ ನಿಗದಿಪಡಿಸಿದ ವಲಯಗಳಿಗೆ ತಲುಪುವಂತೆ ನೋಡಿಕೊಳ್ಳಲು ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಗೃಹಬಳಕೆ ಎಲ್ಪಿಜಿ ಪೂರೈಕೆ ಸ್ಥಿರವಾಗಿದೆ. ವಿತರಕರಲ್ಲಿ ಯಾವುದೇ ಕೊರತೆ ಇಲ್ಲ. ಜತೆಗೆ ಪ್ಯಾನಿಕ್ ಬುಕಿಂಗ್ಗಳು ಕಡಿಮೆಯಾಗಿದ್ದು, ನಾಗರಿಕರು ವಿರತಣಾ ಕೇಂದ್ರಗಳ ಮುಂದೆ ಜಮಾಯಿಸದೇ ಮನೆ ವಿತರಣೆಯನ್ನು ಅವಲಂಬಿಸುವಂತೆ ಅವರು ಸೂಚಿಸಿದ್ದಾರೆ.
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…