ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿರುವ ವೈಷ್ಣವ್, ಡಿಜಿಟಲ್ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಎರಡು ಹಂತಗಳಲ್ಲಿ ಜನಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
೨೦೨೬ರ ಏಪ್ರಿಲ್ನಿಂದ ಸೆಪ್ಟೆಂಬರ್ ಅವಽಯಲ್ಲಿ ನಡೆಯುವ ಮೊದಲ ಹಂತದ ವೇಳೆ ಮನೆಗಳ ಗಣತಿ ಮಾಡಲಾಗುವುದು. ೨೦೨೭ರ ಫೆಬ್ರುವರಿಯಲ್ಲಿ ಜನರ ಗಣತಿ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
೨೦೨೭ರ ಜನಗಣತಿಯು ಮೊದಲ ಡಿಜಿಟಲ್ ಗಣತಿಯಾಗಲಿದೆ. ದತ್ತಾಂಶ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಜನಗಣತಿ ಪ್ರಕ್ರಿಯೆಯ ಡಿಜಿಟಲ್ ವಿನ್ಯಾಸವನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಜನಗಣತಿ ಕಾರ್ಯದ ಜವಾಬ್ದಾರಿ ವಹಿಸಿಕೊಳ್ಳಲು ಅಗತ್ಯವಾಗಿರುವ ಅಧಿಕಾರಿಗಳ ನೇಮಕಾತಿಯನ್ನು ಜ.೧೫ರೊಳಗೆ ಪೂರ್ಣಗೊಳಿಸಬೇಕು ಎಂದು ಭಾರತೀಯ ನೋಂದಣಿಯ ಮಹಾನಿರ್ದೇಶನಾಲಯವು (ಆರ್ಜಿಐ) ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಿತ್ತು.
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…