ದೇಶ- ವಿದೇಶ

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿರುವ ವೈಷ್ಣವ್, ಡಿಜಿಟಲ್ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಎರಡು ಹಂತಗಳಲ್ಲಿ ಜನಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ.

೨೦೨೬ರ ಏಪ್ರಿಲ್‌ನಿಂದ ಸೆಪ್ಟೆಂಬರ್ ಅವಽಯಲ್ಲಿ ನಡೆಯುವ ಮೊದಲ ಹಂತದ ವೇಳೆ ಮನೆಗಳ ಗಣತಿ ಮಾಡಲಾಗುವುದು. ೨೦೨೭ರ ಫೆಬ್ರುವರಿಯಲ್ಲಿ ಜನರ ಗಣತಿ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

೨೦೨೭ರ ಜನಗಣತಿಯು ಮೊದಲ ಡಿಜಿಟಲ್ ಗಣತಿಯಾಗಲಿದೆ. ದತ್ತಾಂಶ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಜನಗಣತಿ ಪ್ರಕ್ರಿಯೆಯ ಡಿಜಿಟಲ್ ವಿನ್ಯಾಸವನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಜನಗಣತಿ ಕಾರ್ಯದ ಜವಾಬ್ದಾರಿ ವಹಿಸಿಕೊಳ್ಳಲು ಅಗತ್ಯವಾಗಿರುವ ಅಧಿಕಾರಿಗಳ ನೇಮಕಾತಿಯನ್ನು ಜ.೧೫ರೊಳಗೆ ಪೂರ್ಣಗೊಳಿಸಬೇಕು ಎಂದು ಭಾರತೀಯ ನೋಂದಣಿಯ ಮಹಾನಿರ್ದೇಶನಾಲಯವು (ಆರ್‌ಜಿಐ) ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

5 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

5 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

5 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

5 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

5 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

5 hours ago