pm naredra Modi
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.
ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ 20,000 ಕೋಟಿ ರೂಗಳಿಗೂ ಹೆಚ್ಚಿನ ಮೊತ್ತವನ್ನು 9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದಾರೆ. ದೇಶದಾದ್ಯಂತ 9.7 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 20,500 ಕೋಟಿ ರೂ.ಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾಯಿಸಲಾಗಿದೆ. ಈ ಯೋಜನೆಯಡಿ ಒಟ್ಟು ವಿತರಣೆಯನ್ನು 3.90 ಲಕ್ಷ ಕೋಟಿ ರೂ ಮೀರಿಸುತ್ತದೆ.
ಕೇಂದ್ರದ ಯೋಜನೆಗಳಾದ ಪಿಎಂ ಕಿಸಾನ್ ಯೋಜನೆ ಕೋಟ್ಯಾಂತರ ರೈತರಿಗೆ ವಾರ್ಷಿಕ 6000 ರೂಗಳ ಆರ್ಥಿಕ ಪ್ರಯೋಜನವನ್ನು ತಲಾ 2000 ರೂಗಳ ಮೂರು ಸಮಾನ ಕಂತುಗಳಲ್ಲಿ ನೀಡುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ನೋಂದಾಯಿತ ರೈತರು ಇ-ಕೆವೈಸಿ ಮಾಡುವುದು ಅತೀ ಅವಶ್ಯಕವಾಗಿದ್ದು, ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಬರುತ್ತದೆ.
ಇನ್ನು 19ನೇ ಕಂತಿನ ಹಣ ಜಮಾ ಆಗದಿದ್ದರೆ ಪಿಎಂ ಕಿಸಾನ್ಗೆ ಎಚ್ಚರಿಕೆ ನೀಡಿ ದೂರು ನೀಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಹಾಯವಾಣಿ ಸಂಖ್ಯೆ 011-24300606ಗೆ ಕರೆ ಮಾಡಿ ದೂರು ನೀಡಲು ಅವಕಾಶ ನೀಡಲಾಗಿದೆ
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…