ದೇಶ- ವಿದೇಶ

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 20ನೇ ಕಂತಿನ ಹಣ ಬಿಡುಗಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 20ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ಕಿಸಾನ್‌ ಸಮ್ಮಾನ್‌ ನಿಧಿಯ 20ನೇ ಕಂತಿನ 20,000 ಕೋಟಿ ರೂಗಳಿಗೂ ಹೆಚ್ಚಿನ ಮೊತ್ತವನ್ನು 9.7 ಕೋಟಿ ರೈತರ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡಿದ್ದಾರೆ. ದೇಶದಾದ್ಯಂತ 9.7 ಕೋಟಿಗೂ ಹೆಚ್ಚು ರೈತರ ಬ್ಯಾಂಕ್‌ ಖಾತೆಗಳಿಗೆ 20,500 ಕೋಟಿ ರೂ.ಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾಯಿಸಲಾಗಿದೆ. ಈ ಯೋಜನೆಯಡಿ ಒಟ್ಟು ವಿತರಣೆಯನ್ನು 3.90 ಲಕ್ಷ ಕೋಟಿ ರೂ ಮೀರಿಸುತ್ತದೆ.

ಕೇಂದ್ರದ ಯೋಜನೆಗಳಾದ ಪಿಎಂ ಕಿಸಾನ್‌ ಯೋಜನೆ ಕೋಟ್ಯಾಂತರ ರೈತರಿಗೆ ವಾರ್ಷಿಕ 6000 ರೂಗಳ ಆರ್ಥಿಕ ಪ್ರಯೋಜನವನ್ನು ತಲಾ 2000 ರೂಗಳ ಮೂರು ಸಮಾನ ಕಂತುಗಳಲ್ಲಿ ನೀಡುತ್ತದೆ. ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿಯಲ್ಲಿ ನೋಂದಾಯಿತ ರೈತರು ಇ-ಕೆವೈಸಿ ಮಾಡುವುದು ಅತೀ ಅವಶ್ಯಕವಾಗಿದ್ದು, ತಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಬರುತ್ತದೆ.

ಇನ್ನು 19ನೇ ಕಂತಿನ ಹಣ ಜಮಾ ಆಗದಿದ್ದರೆ ಪಿಎಂ ಕಿಸಾನ್‌ಗೆ ಎಚ್ಚರಿಕೆ ನೀಡಿ ದೂರು ನೀಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಸಹಾಯವಾಣಿ ಸಂಖ್ಯೆ 011-24300606ಗೆ ಕರೆ ಮಾಡಿ ದೂರು ನೀಡಲು ಅವಕಾಶ ನೀಡಲಾಗಿದೆ

ಆಂದೋಲನ ಡೆಸ್ಕ್

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

29 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago