ದೇಶ- ವಿದೇಶ

65 ವರ್ಷದ ವೃದ್ಧೆಯನ್ನ ಮದುವೆಯಾದ 21ರ ತರುಣ : ಇಬ್ಬರ ಮಧ್ಯೆ ಪ್ರೀತಿ ಚಿಗುರಿದ್ದೆ ಒಂದು ಕತೆ..!

ಚಂಡೀಗಢ : ನಂಬಲು ಅಸಾಧ್ಯ ಎನಿಸಿದರೂ ಇದು ಸತ್ಯ. 21 ವರ್ಷದ ಯುವಕನೊಬ್ಬ 65 ವರ್ಷದ ಅಜ್ಜಿಯನ್ನು ಮದುವೆಯಾಗಿರುವ ವಿಲಕ್ಷಣ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಮೊಹಮ್ಮದ್ ಇರ್ಫಾನ್(21) ಆತನ ಅಜ್ಜಿಯೇ ಆದ ಸುಲ್ತಾನಾ ಖತೂನ್(65) ಎಂಬ ವೃದ್ಧೆಯನ್ನೇ ಮದುವೆಯಾಗಿ ಎಲ್ಲರನ್ನು ದಿಗ್ಬ್ರಾಂತಗೊಳಿಸಿದ್ದಾನೆ. ಪತಿ ಸಾವನ್ನಪ್ಪಿದ ಬಳಿಕ ಜೀವನದಲ್ಲಿ ಸುಲ್ತಾನಾ ಖತೂನ್ ಒಂಟಿಯಾಗಿದ್ದರು. ಈ ವೇಳೆ ಮೊಹಮ್ಮದ್ ಇರ್ಪಾನ್ ಅಜ್ಜಿ ಸುಲ್ತಾನಾ ಖತೂನ್ ಜೊತೆ ಇದ್ದು ಕಾಳಜಿ ವಹಿಸುತ್ತಿದ್ದ. ಇದೇ ಬಾಂಧವ್ಯ ಕೊನೆಗೆ ಸದೃಢವಾಗಿ ಮದುವೆಯಾಗುವ ದುರಂತಕ್ಕೆ ತಂದು ನಿಲ್ಲಿಸಿದೆ. ಈ ಇಬ್ಬರ ಮದುವೆಗೆ ಜನರು ವಿರೋಧ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ವಿಲಕ್ಷಣ, ಅಸಮಾನ್ಯ ವಿವಾಹಗಳು ಈ ಹಿಂದೆಯೂ ವರದಿಯಾಗಿದೆ. 2018ರಲ್ಲಿ 27 ವರ್ಷದ ಹರಿಯಾಣದ ವ್ಯಕ್ತಿಯೊಬ್ಬ ಫೇಸ್‍ಬುಕ್‍ನಲ್ಲಿ ಪರಿಚಯವಾದ 65 ವರ್ಷದ ಅಮೇರಿಕನ್ ಮಹಿಳೆಯನ್ನು ವಿವಾಹವಾಗಿದ್ದ. ಈ ಇಬ್ಬರ ಮದುವೆ ಬಗ್ಗೆಯೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೂ ಪ್ರವೀಣ್, ಮಹಿಳೆ ಕರೆನ್‍ನನ್ನು ಭೇಟಿಯಾಗಲು ಯುಎಸ್ ವೀಸಾಕ್ಕೆ ಅರ್ಜಿ ಸಲ್ಲಿಸುವುದರೊಂದಿಗೆ ತಮ್ಮ ಸಂಬಂಧವನ್ನು ಮುಂದುವರಿಸಿದ್ದ.

ಆಂದೋಲನ ಡೆಸ್ಕ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

2 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

4 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

5 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

7 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago