ನವದೆಹಲಿ: ಕೊಲ್ಕತ್ತಾದ ಖಾಸಗಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ.
ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳು, ಖಾಸಗಿ ಹಾಗೂ ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮತ್ತು ಒಪಿಡಿ ಕಾರ್ಯ ನಿರ್ವಹಿಸುವುದಿಲ್ಲ ಬದಲಿಗೆ ಎಲ್ಲಾ ಅಗತ್ಯ ಸೇವೆಗಳು ಇರಲಿವೆ ಎಂದು ತನ್ನ ಹೇಳಿಕೆ ಬಿಡುಗಡೆ ಮಾಡಿದೆ.
ಕೊಲ್ಕತ್ತಾದ ಆರ್ಜಿ ಕರ್ ಮೆಡಿಕಲ್ ಕಾಲೇಜಿನ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುಂಪೊಂದು ತಡರಾತ್ರಿ ದಾಳಿ ಮಾಡಿತ್ತು. ಇದನ್ನು ಪರಿಗಣಿಸಿದ ಐಎಂಎ ತುರ್ತು ಸಭೆ ನಡೆಸಿ ಅಪಘಾತ ಮತ್ತು ತುರ್ತು ಸೇವೆಗಳಿಗೆ ಅಡ್ಡಿಯಾಗದಂತೆ ಪ್ರತಿಭಟನೆ ನಡೆಸುವುದಾಗಿ ಹೇಳಿದೆ.
ಆಗಸ್ಟ್ 9 ರ ಮುಂಜಾನೆ ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಚೆಸ್ಟ್ ಮೆಡಿಸಿನ್ನ ಯುವ ಸ್ನಾತಕೋತ್ತರ ಪದವೀಧರರನ್ನು ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆ ಮಾಡಲಾಯಿತು. ಅಂದಿನಿಂದ ಇಲ್ಲಿಯ ನಿವಾಸಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಐಎಂಎ ವತಿಯಿಂದ ದೇಶಾದ್ಯಂತ ಪ್ರತಿಭಟನೆಗಳು ಹಾಗೂ ಕ್ಯಾಂಡಲ್ ಮೆರವಣಿಗೆಗಳು ನಡೆದಿವೆ. ಅಪರಾಧ ಪರಿಸ್ಥಿತಿಯನ್ನು ಕಾಲೇಜು ಅಧಿಕಾರಿಗಳು ನಿಭಾಯಿಸುಲ್ಲಿ ಸೋತಿದ್ದಾರೆ.
ಆಗಸ್ಟ್ 13ರಂದು, ಕಲ್ಕತ್ತಾ ಹೈಕೋರ್ಟ್ ಅತ್ಯಾಚಾರ ಪ್ರಕರಣ ಸಂಬಂಧ ಇದುವರೆಗಿನ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪ್ರಕರಣವನ್ನು ಸಿಬಿಐ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರನ್ನು ಕೇಳಿತು. ರಾಜ್ಯ ಪೊಲೀಸರು ತಮ್ಮ ತನಿಖೆಯನ್ನು ಮುಂದುವರಿಸಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆಯನ್ನೂ ಕೋರ್ಟ್ ಹೇಳಿತ್ತು. ಇದಾದ ಬಳಿಕ ಆಗಸ್ಟ್ 15 ರಂದು ದೊಡ್ಡ ಗುಂಪೊಂದು ಆಸ್ಪತ್ರೆ ಮೇಲೆ ದಾಳಿ ಮಾಡಿ ಸಾಕ್ಷಿ ನಾಶಕ್ಕೆ ಯತ್ನಿಸಿತ್ತು. ಜೊತೆಗೆ ಪ್ರತಿಭಟನೆ ನಡೆಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆಸಿತ್ತು.
ವೃತ್ತಿಯ ಸ್ವರೂಪದಿಂದಾಗಿ ವೈದ್ಯರು ವಿಶೇಷವಾಗಿ ಮಹಿಳೆಯರು ಹಿಂಸೆಗೆ ಗುರಿಯಾಗುತ್ತಾರೆ. ಆಸ್ಪತ್ರೆಗಳು ಮತ್ತು ಕ್ಯಾಂಪಸ್ಗಳ ಒಳಗೆ ವೈದ್ಯರ ಸುರಕ್ಷತೆಯನ್ನು ಒದಗಿಸುವುದು ಅಧಿಕಾರಿಗಳು. ದೈಹಿಕ ಹಲ್ಲೆಗಳು ಮತ್ತು ಅಪರಾಧಗಳು ಎರಡೂ ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರ ಅಗತ್ಯಗಳಿಗೆ ಸಂಬಂಧಿಸಿದ ಅಧಿಕಾರಿಗಳ ಉದಾಸೀನತೆ ಕಾರಣವಾಗಿದೆ.
ಕೋಲ್ಕತ್ತಾದ ಆರ್ ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಕ್ರೂರ ಅಪರಾಧ ಮತ್ತು ಗೂಂಡಾಗಿರಿಯ ವಿರುದ್ಧ ಆ.17 ರಂದು ಬೆಳಿಗ್ಗೆ 6 ರಿಂದ ಆ.18 ರ ಭಾನುವಾರ ಬೆಳಿಗ್ಗೆ 6 ಗಂಟೆ ವರೆಗೆ 24 ಗಂಟೆಗಳ ಕಾಲ ಔಷಧ ಸೇರಿದಂತೆ ಎಲ್ಲಾ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು. ಗಾಯಾಳುಗಳನ್ನು ನಿರ್ವಹಿಸಲಾಗುವುದು. ಆದರೆ ದಿನನಿತ್ಯದ OPD ಗಳು ಕಾರ್ಯನಿರ್ವಹಿಸುವುದಿಲ್ಲ ಮತ್ತು ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…