ದೇಶ- ವಿದೇಶ

ದೇಶಾದ್ಯಂತ 24 ಗಂಟೆಗಳ ಕಾಲ ವೈದ್ಯಕೀಯ ಸೇವೆ ಬಂದ್‌!

ನವದೆಹಲಿ: ಕೊಲ್ಕತ್ತಾದ ಖಾಸಗಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ.

ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳು, ಖಾಸಗಿ ಹಾಗೂ ಕಾರ್ಪೊರೇಟ್‌ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮತ್ತು ಒಪಿಡಿ ಕಾರ್ಯ ನಿರ್ವಹಿಸುವುದಿಲ್ಲ ಬದಲಿಗೆ ಎಲ್ಲಾ ಅಗತ್ಯ ಸೇವೆಗಳು ಇರಲಿವೆ ಎಂದು ತನ್ನ ಹೇಳಿಕೆ ಬಿಡುಗಡೆ ಮಾಡಿದೆ.

ಕೊಲ್ಕತ್ತಾದ ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿನ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುಂಪೊಂದು ತಡರಾತ್ರಿ ದಾಳಿ ಮಾಡಿತ್ತು. ಇದನ್ನು ಪರಿಗಣಿಸಿದ ಐಎಂಎ ತುರ್ತು ಸಭೆ ನಡೆಸಿ ಅಪಘಾತ ಮತ್ತು ತುರ್ತು ಸೇವೆಗಳಿಗೆ ಅಡ್ಡಿಯಾಗದಂತೆ ಪ್ರತಿಭಟನೆ ನಡೆಸುವುದಾಗಿ ಹೇಳಿದೆ.

ಆಗಸ್ಟ್ 9 ರ ಮುಂಜಾನೆ ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್‌ ಕಾಲೇಜಿನಲ್ಲಿ ಚೆಸ್ಟ್ ಮೆಡಿಸಿನ್‌ನ ಯುವ ಸ್ನಾತಕೋತ್ತರ ಪದವೀಧರರನ್ನು ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆ ಮಾಡಲಾಯಿತು. ಅಂದಿನಿಂದ ಇಲ್ಲಿಯ ನಿವಾಸಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಐಎಂಎ ವತಿಯಿಂದ ದೇಶಾದ್ಯಂತ ಪ್ರತಿಭಟನೆಗಳು ಹಾಗೂ ಕ್ಯಾಂಡಲ್ ಮೆರವಣಿಗೆಗಳು ನಡೆದಿವೆ. ಅಪರಾಧ ಪರಿಸ್ಥಿತಿಯನ್ನು ಕಾಲೇಜು ಅಧಿಕಾರಿಗಳು ನಿಭಾಯಿಸುಲ್ಲಿ ಸೋತಿದ್ದಾರೆ.

ಆಗಸ್ಟ್ 13ರಂದು, ಕಲ್ಕತ್ತಾ ಹೈಕೋರ್ಟ್ ಅತ್ಯಾಚಾರ ಪ್ರಕರಣ ಸಂಬಂಧ ಇದುವರೆಗಿನ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪ್ರಕರಣವನ್ನು ಸಿಬಿಐ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರನ್ನು ಕೇಳಿತು. ರಾಜ್ಯ ಪೊಲೀಸರು ತಮ್ಮ ತನಿಖೆಯನ್ನು ಮುಂದುವರಿಸಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆಯನ್ನೂ ಕೋರ್ಟ್‌ ಹೇಳಿತ್ತು. ಇದಾದ ಬಳಿಕ ಆಗಸ್ಟ್ 15 ರಂದು ದೊಡ್ಡ ಗುಂಪೊಂದು ಆಸ್ಪತ್ರೆ ಮೇಲೆ ದಾಳಿ ಮಾಡಿ ಸಾಕ್ಷಿ ನಾಶಕ್ಕೆ ಯತ್ನಿಸಿತ್ತು. ಜೊತೆಗೆ ಪ್ರತಿಭಟನೆ ನಡೆಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆಸಿತ್ತು.

ವೃತ್ತಿಯ ಸ್ವರೂಪದಿಂದಾಗಿ ವೈದ್ಯರು ವಿಶೇಷವಾಗಿ ಮಹಿಳೆಯರು ಹಿಂಸೆಗೆ ಗುರಿಯಾಗುತ್ತಾರೆ. ಆಸ್ಪತ್ರೆಗಳು ಮತ್ತು ಕ್ಯಾಂಪಸ್‌ಗಳ ಒಳಗೆ ವೈದ್ಯರ ಸುರಕ್ಷತೆಯನ್ನು ಒದಗಿಸುವುದು ಅಧಿಕಾರಿಗಳು. ದೈಹಿಕ ಹಲ್ಲೆಗಳು ಮತ್ತು ಅಪರಾಧಗಳು ಎರಡೂ ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರ ಅಗತ್ಯಗಳಿಗೆ ಸಂಬಂಧಿಸಿದ ಅಧಿಕಾರಿಗಳ ಉದಾಸೀನತೆ ಕಾರಣವಾಗಿದೆ.

ಕೋಲ್ಕತ್ತಾದ ಆರ್ ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಕ್ರೂರ ಅಪರಾಧ ಮತ್ತು ಗೂಂಡಾಗಿರಿಯ ವಿರುದ್ಧ ಆ.17 ರಂದು ಬೆಳಿಗ್ಗೆ 6 ರಿಂದ ಆ.18 ರ ಭಾನುವಾರ ಬೆಳಿಗ್ಗೆ 6 ಗಂಟೆ ವರೆಗೆ 24 ಗಂಟೆಗಳ ಕಾಲ ಔಷಧ ಸೇರಿದಂತೆ ಎಲ್ಲಾ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು. ಗಾಯಾಳುಗಳನ್ನು ನಿರ್ವಹಿಸಲಾಗುವುದು. ಆದರೆ ದಿನನಿತ್ಯದ OPD ಗಳು ಕಾರ್ಯನಿರ್ವಹಿಸುವುದಿಲ್ಲ ಮತ್ತು ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

2 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

2 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

2 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

3 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

3 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago