ಲಕ್ನೋ: ರಾಮ ಇದ್ದ ಜಾಗದಲ್ಲಿ ರಾವಣ ಇರಲೇಬೇಕು. ಹೀಗಾಗಿ ಶ್ರೀ ರಾಮಮಂದಿರ ಸ್ಥಾಪನೆಯಾಗಿರುವ ಅಯೋಧ್ಯೆಯಲ್ಲಿ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ.
ಅಯೋಧ್ಯೆಯಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಯೋಗಿ ಆದಿತ್ಯನಾಥ್ ಸರ್ಕಾರವು ಅಯೋಧ್ಯೆಯಲ್ಲಿ ಅಭಿವೃದ್ಧಿಪಡಿಸುತ್ತಿರುವ ಭವ್ಯ ರಾಮಾಯಣ ಉದ್ಯಾನದಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆಯನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ತಿಳಿಸಿದೆ.
ಈ ಪ್ರತಿಮೆಯು ಭಗವಾನ್ ರಾಮ ಮತ್ತು ರಾವಣನ ನಡುವಿನ ಯುದ್ಧವನ್ನು ಚಿತ್ರಿಸುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಪ್ತಾರ್ ಘಾಟ್ ಬಳಿ ಈ ಉದ್ಯಾನ ನಿರ್ಮಿಸಲಾಗುತ್ತಿದೆ. ಮತ್ತೊಂದು ಪ್ರಮುಖ ಆಕರ್ಷಣೆ ರಾಮ ದರ್ಬಾರ್ ಆಗಿದ್ದು, ಇದರಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ಪ್ರತಿಮೆಗಳಿವೆ.
ರಾಮಾಯಣದ ಪ್ರಮುಖ ಕ್ಷಣಗಳ ಆಧ್ಯಾತ್ಮಿಕ ಅನುಭವವನ್ನು ಜನರಿಗೆ ಒದಗಿಸುವುದು ಇದರ ಉದ್ದೇಶವಾಗಿದೆ. ಹೀಗಾಗಿ ರಾಮ-ರಾವಣ ಯುದ್ಧದ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಲಂಕಾಸುರನ ಪ್ರತಿಮೆ ಸ್ಥಾಪಿಸಲಾಗುತ್ತಿದೆ.
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…