ದೇಶ- ವಿದೇಶ

ಅಮರನಾಥ ಯಾತ್ರೆಗೆ ಹೊರಟ 1490 ಯಾತ್ರಿಕರ 27ನೇ ತಂಡ

ಜಮ್ಮು-ಕಾಶ್ಮೀರ: ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್ ಎತ್ತರದ ಅಮರನಾಥ ಗುಹಾ ದೇವಾಲಯದ ಅವಳಿ ಮೂಲ ಶಿಬಿರಗಳಿಗೆ 1490 ಯಾತ್ರಿಕರ 27ನೇ ತಂಡ ಜಮ್ಮುವಿನಿಂದ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಹೊರಟಿತು.

ಜುಲೈ.3ರಂದು ಕಣಿವೆಯಿಂದ 38 ದಿನಗಳ ತೀರ್ಥಯಾತ್ರೆ ಪ್ರಾರಂಭವಾದಾಗಿನಿಂದ 3.86 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಗುಹಾ ದೇವಾಲಯದಲ್ಲಿರುವ ಶಿವನ ಹಿಮಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ.

1,262 ಪುರುಷರು, 186 ಮಹಿಳೆಯರು, 42 ಸಾಧುಗಳು ಮತ್ತು ಸಾಧ್ವಿಗಳು ಸೇರಿದಂತೆ 27ನೇ ತಂಡವು ಭಗವತಿ ನಗರ ಮೂಲ ಶಿಬಿರದಿಂದ 61 ವಾಹನಗಳಲ್ಲಿ ಕಾಶ್ಮೀರದ ಅವಳಿ ಮೂಲ ಶಿಬಿರಗಳಿಗೆ 61 ವಾಹನಗಳಲ್ಲಿ ಸಿಆರ್‍ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಬೆಳಗಿನ ಜಾವ 3:25 ರಿಂದ 3.57ರ ನಡುವೆ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

16 ವಾಹನಗಳಲ್ಲಿ 327 ಯಾತ್ರಿಕರನ್ನು ಹೊತ್ತ ಮೊದಲ ಯಾತ್ರಿಕರ ಬೆಂಗಾವಲು 14 ಕಿಮೀ ಬಾಲ್ಟಾಲ್ ಮಾರ್ಗಕ್ಕೆ, ನಂತರ 45 ವಾಹನಗಳಲ್ಲಿ 1,163 ಯಾತ್ರಿಕರ ಎರಡನೇ ಬೆಂಗಾವಲು ಯಾತ್ರೆಯನ್ನು ಕೈಗೊಂಡಿದ್ದು, ಅನಂತ್‍ನಾಗ್ ಜಿಲ್ಲೆಯ 48 ಕಿಮೀ ಸಾಂಪ್ರದಾಯಿಕ ಪಹಲ್ಗಾಮ್ ಮಾರ್ಗದ ಮೂಲಕ ಯಾತ್ರೆ ಕೈಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಇದರೊಂದಿಗೆ, ಜುಲೈ.2ರಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದ ನಂತರ ಒಟ್ಟು 14,27,85 ಯಾತ್ರಿಕರು ಜಮ್ಮು ಮೂಲ ಶಿಬಿರದಿಂದ ಕಣಿವೆಗೆ ತೆರಳಿದ್ದಾರೆ. ಕಳೆದ ವರ್ಷ, ನೈಸರ್ಗಿಕವಾಗಿ ರೂಪುಗೊಂಡ ಹಿಮಲಿಂಗವನ್ನು ಹೊಂದಿರುವ ಗುಹಾ ದೇವಾಲಯದಲ್ಲಿ 5.10 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪೂಜೆ ಸಲ್ಲಿಸಿದ್ದಾರೆ. ರಕ್ಷಾಬಂಧನ ಹಬ್ಬದೊಂದಿಗೆ ಆಗಸ್ಟ್.9ರಂದು ತೀರ್ಥಯಾತ್ರೆ ಕೊನೆಗೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

2 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

2 hours ago