Amarnath Yatra
ಜಮ್ಮು-ಕಾಶ್ಮೀರ: ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್ ಎತ್ತರದ ಅಮರನಾಥ ಗುಹಾ ದೇವಾಲಯದ ಅವಳಿ ಮೂಲ ಶಿಬಿರಗಳಿಗೆ 1490 ಯಾತ್ರಿಕರ 27ನೇ ತಂಡ ಜಮ್ಮುವಿನಿಂದ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಹೊರಟಿತು.
ಜುಲೈ.3ರಂದು ಕಣಿವೆಯಿಂದ 38 ದಿನಗಳ ತೀರ್ಥಯಾತ್ರೆ ಪ್ರಾರಂಭವಾದಾಗಿನಿಂದ 3.86 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಗುಹಾ ದೇವಾಲಯದಲ್ಲಿರುವ ಶಿವನ ಹಿಮಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ.
1,262 ಪುರುಷರು, 186 ಮಹಿಳೆಯರು, 42 ಸಾಧುಗಳು ಮತ್ತು ಸಾಧ್ವಿಗಳು ಸೇರಿದಂತೆ 27ನೇ ತಂಡವು ಭಗವತಿ ನಗರ ಮೂಲ ಶಿಬಿರದಿಂದ 61 ವಾಹನಗಳಲ್ಲಿ ಕಾಶ್ಮೀರದ ಅವಳಿ ಮೂಲ ಶಿಬಿರಗಳಿಗೆ 61 ವಾಹನಗಳಲ್ಲಿ ಸಿಆರ್ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿಯ ಬೆಂಗಾವಲಿನೊಂದಿಗೆ ಬೆಳಗಿನ ಜಾವ 3:25 ರಿಂದ 3.57ರ ನಡುವೆ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
16 ವಾಹನಗಳಲ್ಲಿ 327 ಯಾತ್ರಿಕರನ್ನು ಹೊತ್ತ ಮೊದಲ ಯಾತ್ರಿಕರ ಬೆಂಗಾವಲು 14 ಕಿಮೀ ಬಾಲ್ಟಾಲ್ ಮಾರ್ಗಕ್ಕೆ, ನಂತರ 45 ವಾಹನಗಳಲ್ಲಿ 1,163 ಯಾತ್ರಿಕರ ಎರಡನೇ ಬೆಂಗಾವಲು ಯಾತ್ರೆಯನ್ನು ಕೈಗೊಂಡಿದ್ದು, ಅನಂತ್ನಾಗ್ ಜಿಲ್ಲೆಯ 48 ಕಿಮೀ ಸಾಂಪ್ರದಾಯಿಕ ಪಹಲ್ಗಾಮ್ ಮಾರ್ಗದ ಮೂಲಕ ಯಾತ್ರೆ ಕೈಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.
ಇದರೊಂದಿಗೆ, ಜುಲೈ.2ರಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮೊದಲ ಬ್ಯಾಚ್ಗೆ ಚಾಲನೆ ನೀಡಿದ ನಂತರ ಒಟ್ಟು 14,27,85 ಯಾತ್ರಿಕರು ಜಮ್ಮು ಮೂಲ ಶಿಬಿರದಿಂದ ಕಣಿವೆಗೆ ತೆರಳಿದ್ದಾರೆ. ಕಳೆದ ವರ್ಷ, ನೈಸರ್ಗಿಕವಾಗಿ ರೂಪುಗೊಂಡ ಹಿಮಲಿಂಗವನ್ನು ಹೊಂದಿರುವ ಗುಹಾ ದೇವಾಲಯದಲ್ಲಿ 5.10 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪೂಜೆ ಸಲ್ಲಿಸಿದ್ದಾರೆ. ರಕ್ಷಾಬಂಧನ ಹಬ್ಬದೊಂದಿಗೆ ಆಗಸ್ಟ್.9ರಂದು ತೀರ್ಥಯಾತ್ರೆ ಕೊನೆಗೊಳ್ಳಲಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…