ಜಮ್ಮು : ಶೇಲ್‌ ದಾಳಿಗೆ ನಾಲ್ವರು ಯೋಧರು ಹುತಾತ್ಮ

ಜಮ್ಮು: ಜಮ್ಮು – ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಶೇಲ್‌ ದಾಳಿಗೆ 24 ಗಂಟೆಗಳಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮುವಿನ ಆರ್.ಎಸ್. ಪುರ ಸೆಕ್ಟರ್‌ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಬ್ ಇನ್‌ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ.

ಜೊತೆಗೆ ಇತರ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಹಿಮಾಚಲ ಪ್ರದೇಶ ಮೂಲದ ಜೆಸಿಒ ಸುಬೇದಾರ್ ಮೇಜರ್ ಪವನ್ ಕುಮಾರ್ ಶನಿವಾರ ಮುಂಜಾನೆ ಪೂಂಚ್ ಪ್ರದೇಶದ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಶೆಲ್ ಸಿಡಿದು ಮೃತಪಟ್ಟಿದ್ದಾರೆ.

ಅಂತೆಯೇ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್‌ಫೆಂಟ್ರಿಯ ರೈಫಲ್‌ಮನ್ ಸುನಿಲ್ ಕುಮಾರ್ (25) ಅವರು ಆರ್.ಎಸ್.ಪುರ ಪ್ರದೇಶದಲ್ಲಿ ನಡೆದ ಗುಂಡಿನದಾಳಿ ಮತ್ತು ಶೆಲ್ಲಿಂಗ್‌ನಲ್ಲಿ ತೀವ್ರವಾಗಿ ಗಾಯಗೊಂಡು ಅಸುನೀಗಿದ್ದಾರೆ.

ಐಎಎಫ್ 36ನೇ ವಿಂಗ್‌ಗೆ ಸೇರಿದ 36 ವರ್ಷದ ವೈದ್ಯಕೀಯ ಸಹಾಯಕ ಸರ್ಜೆಂಟ್ ಸುರೇಂದ್ರ ಕುಮಾರ್ ಮೋಗಾ ಉಧಾಂಪುರದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಮೂಲತಃ ಬೆಂಗಳೂರಿನಲ್ಲಿ ನಿಯೋಜಿಸಲ್ಪಟ್ಟಿದ್ದ ಇವರು, ನಾಲ್ಕು ದಿನಗಳ ಹಿಂದೆ ಉದ್ವಿಗ್ನತೆ ಹಿನ್ನೆಲೆಯಲ್ಲಿ ಉಧಾಂಪುರಕ್ಕೆ ನಿಯೋಜಿತರಾಗಿದ್ದರು. ರಾಜಸ್ಥಾನದ ಮೆಹರ್ದಾಸಿಯಲ್ಲಿರುವ ಮೋಗಾ ಕುಟುಂಬಕ್ಕೆ ಈ ಮಾಹಿತಿಯನ್ನು ರವಾನಿಸಲಾಗಿದೆ. ಅವರಿಗೆ65 ವರ್ಷದ ತಾಯಿ ನಾನು ದೇವಿ, ಪತ್ನಿ ಸೀಮಾ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅವರ ಗೌರವಾರ್ಥ ಇಡೀ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ಆರ್.ಎಸ್. ಪುರ ಪ್ರದೇಶದಲ್ಲಿ ಪಾಕ್ ನಡೆಸಿದ ತೀವ್ರ ದಾಳಿಯಲ್ಲಿ ಬಿಎಸ್‌ಎಫ್ ಘಟಕದ ಸಬ್ ಇನ್‌ಸ್ಪೆಕ್ಟರ್ ಮೊಹ್ಮದ್ ಇಮ್ತಿಯಾಜ್ ಹುತಾತ್ಮರಾಗಿದ್ದರೆ, ಇತರ ಏಳು ಮಂದಿ ಗಾಯಗೊಂಡಿದ್ದಾರೆ.
ಹುತಾತ್ಮ ಅಧಿಕಾರಿಗೆ ಗೌರವ ಸಲ್ಲಿಸಲು ಭಾನುವಾರ ಜಮ್ಮುವಿನ ಪಲೌರಾದಲ್ಲಿರುವ ಬಿಎಸ್‌ಎಫ್ ಪ್ರಧಾನ ಕಚೇರಿಯಲ್ಲಿ ಪೂರ್ಣ ಗೌರವಗಳೊಂದಿಗೆ ಮಾಲಾರ್ಪಣೆ ಸಮಾರಂಭ ನಡೆಯಿತು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

5 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

6 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

7 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

8 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

9 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

9 hours ago