ಜಮ್ಮು : ಶೇಲ್‌ ದಾಳಿಗೆ ನಾಲ್ವರು ಯೋಧರು ಹುತಾತ್ಮ

ಜಮ್ಮು: ಜಮ್ಮು – ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಶೇಲ್‌ ದಾಳಿಗೆ 24 ಗಂಟೆಗಳಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮುವಿನ ಆರ್.ಎಸ್. ಪುರ ಸೆಕ್ಟರ್‌ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಬ್ ಇನ್‌ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ.

ಜೊತೆಗೆ ಇತರ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಹಿಮಾಚಲ ಪ್ರದೇಶ ಮೂಲದ ಜೆಸಿಒ ಸುಬೇದಾರ್ ಮೇಜರ್ ಪವನ್ ಕುಮಾರ್ ಶನಿವಾರ ಮುಂಜಾನೆ ಪೂಂಚ್ ಪ್ರದೇಶದ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಶೆಲ್ ಸಿಡಿದು ಮೃತಪಟ್ಟಿದ್ದಾರೆ.

ಅಂತೆಯೇ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್‌ಫೆಂಟ್ರಿಯ ರೈಫಲ್‌ಮನ್ ಸುನಿಲ್ ಕುಮಾರ್ (25) ಅವರು ಆರ್.ಎಸ್.ಪುರ ಪ್ರದೇಶದಲ್ಲಿ ನಡೆದ ಗುಂಡಿನದಾಳಿ ಮತ್ತು ಶೆಲ್ಲಿಂಗ್‌ನಲ್ಲಿ ತೀವ್ರವಾಗಿ ಗಾಯಗೊಂಡು ಅಸುನೀಗಿದ್ದಾರೆ.

ಐಎಎಫ್ 36ನೇ ವಿಂಗ್‌ಗೆ ಸೇರಿದ 36 ವರ್ಷದ ವೈದ್ಯಕೀಯ ಸಹಾಯಕ ಸರ್ಜೆಂಟ್ ಸುರೇಂದ್ರ ಕುಮಾರ್ ಮೋಗಾ ಉಧಾಂಪುರದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಮೂಲತಃ ಬೆಂಗಳೂರಿನಲ್ಲಿ ನಿಯೋಜಿಸಲ್ಪಟ್ಟಿದ್ದ ಇವರು, ನಾಲ್ಕು ದಿನಗಳ ಹಿಂದೆ ಉದ್ವಿಗ್ನತೆ ಹಿನ್ನೆಲೆಯಲ್ಲಿ ಉಧಾಂಪುರಕ್ಕೆ ನಿಯೋಜಿತರಾಗಿದ್ದರು. ರಾಜಸ್ಥಾನದ ಮೆಹರ್ದಾಸಿಯಲ್ಲಿರುವ ಮೋಗಾ ಕುಟುಂಬಕ್ಕೆ ಈ ಮಾಹಿತಿಯನ್ನು ರವಾನಿಸಲಾಗಿದೆ. ಅವರಿಗೆ65 ವರ್ಷದ ತಾಯಿ ನಾನು ದೇವಿ, ಪತ್ನಿ ಸೀಮಾ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅವರ ಗೌರವಾರ್ಥ ಇಡೀ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ಆರ್.ಎಸ್. ಪುರ ಪ್ರದೇಶದಲ್ಲಿ ಪಾಕ್ ನಡೆಸಿದ ತೀವ್ರ ದಾಳಿಯಲ್ಲಿ ಬಿಎಸ್‌ಎಫ್ ಘಟಕದ ಸಬ್ ಇನ್‌ಸ್ಪೆಕ್ಟರ್ ಮೊಹ್ಮದ್ ಇಮ್ತಿಯಾಜ್ ಹುತಾತ್ಮರಾಗಿದ್ದರೆ, ಇತರ ಏಳು ಮಂದಿ ಗಾಯಗೊಂಡಿದ್ದಾರೆ.
ಹುತಾತ್ಮ ಅಧಿಕಾರಿಗೆ ಗೌರವ ಸಲ್ಲಿಸಲು ಭಾನುವಾರ ಜಮ್ಮುವಿನ ಪಲೌರಾದಲ್ಲಿರುವ ಬಿಎಸ್‌ಎಫ್ ಪ್ರಧಾನ ಕಚೇರಿಯಲ್ಲಿ ಪೂರ್ಣ ಗೌರವಗಳೊಂದಿಗೆ ಮಾಲಾರ್ಪಣೆ ಸಮಾರಂಭ ನಡೆಯಿತು.

ಆಂದೋಲನ ಡೆಸ್ಕ್

Recent Posts

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

2 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

8 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

8 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

8 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

8 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

8 hours ago