ದೇಶ- ವಿದೇಶ

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ ಎಂದು ಮಹಾರಾಷ್ಟ್ರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ವರದಿಯಲ್ಲಿ ತಿಳಿಸಿದೆ.

ದೂರುದಾರ ಸಂದೀಪ್ ದತ್ತಾ ಪಾಟೀಲ್ ಅವರ ಹೇಳಿಕೆಗಳಲ್ಲಿ ಗಂಭೀರ ವ್ಯತ್ಯಾಸಗಳು, ಕರೆ ವಿವರಗಳು, ಪ್ರಯಾಣ ಮಾರ್ಗ ಮತ್ತು ಸಮಯದಲ್ಲಿ ಹೋಲಿಕೆಯಾಗಿಲ್ಲ ಎಂದು ತನಿಖೆಯಲ್ಲಿ ಧೃಢಪಟ್ಟಿದೆ.

ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಯಲ್ಲಿ ಜನವರಿ 1, 2026ರಂದು ಸಲ್ಲಿಸಲಾದ ದೂರಿನಲ್ಲಿ ಸಂದೀಪ್ ಪಾಟೀಲ್ (ನಾಸಿಕ್ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ) “ಗೋವಾದಿಂದ ಅಹಮದಾಬಾದ್‌ನ ಒಂದು ಆಶ್ರಮಕ್ಕೆ ಕರ್ನಾಟಕ ಮಾರ್ಗವಾಗಿ ಸಾಗಿಸುತ್ತಿದ್ದ ಎರಡು ಕಂಟೇನರ್ ಟ್ರಕ್‌ಗಳಲ್ಲಿ 400 ಕೋಟಿ ರೂಪಾಯಿ ಮೌಲ್ಯದ ರದ್ದಾದ 2,000 ರೂ.ನೋಟುಗಳನ್ನು ಚೋರ್ಲಾ ಘಾಟ್ ಬಳಿ (ಖಾನಾಪುರ ತಾಲೂಕು, ಬೆಳಗಾವಿ ಜಿಲ್ಲೆ) ದರೋಡೆ ಮಾಡಲಾಗಿದೆ. ನನ್ನನ್ನು ಅಪಹರಿಸಿ, ಹಲ್ಲೆ ನಡೆಸಿ ಬೆದರಿಕೆ ಹಾಕಲಾಗಿದೆ” ಎಂದು ಹೇಳಿದ್ದರು. ಬಳಿಕ ಠಾಣೆಗೆ ದೂರು ಸಹ ದಾಖಲಿಸಿದ್ದರು.

ಈ ದೂರಿನ ಬೆನ್ನಲ್ಲೇ ಮಹಾರಾಷ್ಟ್ರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದರು – ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸಾವಳೆ (ಹಣದ ಮಾಲೀಕ ಎಂಬ ಆರೋಪ), ಹವಾಲಾ ಏಜೆಂಟ್ ವಿರಾಟ್ ಗಾಂಧಿ, ಜಯೇಶ್ ಕಡಂ, ವಿಶಾಲ್ ನಾಯ್ಡು, ಸುನೀಲ್ ಧುಮಾಳ್, ಮಚ್ಚೀಂದ್ರ ಮಾಡವಿ ಮತ್ತು ಜನಾರ್ಧನ್ ಧಾಯ್ಗುಡೆ. ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತು. ಬೆಳಗಾವಿ, ಗೋವಾ ಮತ್ತು ಮಹಾರಾಷ್ಟ್ರ ಪೊಲೀಸರು ಸಂಯುಕ್ತ ತನಿಖೆ ನಡೆಸಿದ್ದರು. ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಅವರು “ಕರ್ನಾಟಕದಲ್ಲಿ ಯಾವುದೇ ದೂರು ಬಂದಿಲ್ಲ, ಸಾಕ್ಷ್ಯವೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ರಚಿಸಿ ಒಂದು ತಿಂಗಳ ಕಾಲ ತೀವ್ರ ತನಿಖೆ ನಡೆಸಿತು. ಡಿಜಿಟಲ್ ಆಧಾರಗಳು, ಕರೆ ವಿವರಗಳು (ಸಿಡಿಆರ್), ಜಿಪಿಎಸ್, ಪ್ರಯಾಣ ಮಾರ್ಗ, ಸಮಯ ವ್ಯತ್ಯಾಸಗಳು ಪರಿಶೀಲಿಸಲಾಯಿತು. ಬಾಹ್ಯ ಏಜೆನ್ಸಿಗಳಿಂದಲೂ ಯಾವುದೇ ದರೋಡೆ ನಡೆದಿಲ್ಲ ಎಂಬ ಮಾಹಿತಿ ಬಂದಿತು. “ಪ್ರಕರಣವೇ ಸುಳ್ಳು, ಯಾವುದೇ ಕಂಟೇನರ್ ದರೋಡೆಯಾಗಿಲ್ಲ” ಎಂದು ಎಸ್‌ಐಟಿ ವರದಿ ಮಹಾರಾಷ್ಟ್ರ ಸರ್ಕಾರಕ್ಕೆ ಸಲ್ಲಿಸಿದೆ.

ನಾಸಿಕ್‌ನ ಇಗತ್‌ಪುರಿ ನ್ಯಾಯಾಲಯವು ಏಳು ಆರೋಪಿಗಳನ್ನೂ ಸಾಕ್ಷ್ಯ ಕೊರತೆಯಿಂದ ಬಿಡುಗಡೆ ಮಾಡಿದೆ. ನಾಸಿಕ್ ಗ್ರಾಮೀಣ ಪೊಲೀಸರು ಈಗ ಸಂದೀಪ್ ಪಾಟೀಲ್ ವಿರುದ್ಧ ಸುಳ್ಳು ದೂರು ದಾಖಲಿಸಿದ ಆರೋಪದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ಪೊಲೀಸ್ ಸಂಪನ್ಮೂಲಗಳು ಒಂದು ತಿಂಗಳ ಕಾಲ ವ್ಯರ್ಥವಾಗಿವೆ ಎಂದು ಅಧಿಕಾರಿಗಳು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣ ಜನವರಿಯಲ್ಲಿ ರಾಜಕೀಯ ವಿವಾದಕ್ಕೂ ಕಾರಣವಾಗಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಗಡಿ ಸುರಕ್ಷತೆ, ಪೊಲೀಸ್ ತನಿಖೆ ಬಗ್ಗೆ ಆರೋಪ-ಪ್ರತ್ಯಾರೋಪಗಳು ನಡೆದಿದ್ದವು. ಈಗ ಎಲ್ಲವೂ ‘ಕಟ್ಟುಕಥೆ’ ಎಂದು ಸಾಬೀತಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

8 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

21 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

23 hours ago