ದೇಶ- ವಿದೇಶ

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ ಎಂದು ಮಹಾರಾಷ್ಟ್ರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ವರದಿಯಲ್ಲಿ ತಿಳಿಸಿದೆ.

ದೂರುದಾರ ಸಂದೀಪ್ ದತ್ತಾ ಪಾಟೀಲ್ ಅವರ ಹೇಳಿಕೆಗಳಲ್ಲಿ ಗಂಭೀರ ವ್ಯತ್ಯಾಸಗಳು, ಕರೆ ವಿವರಗಳು, ಪ್ರಯಾಣ ಮಾರ್ಗ ಮತ್ತು ಸಮಯದಲ್ಲಿ ಹೋಲಿಕೆಯಾಗಿಲ್ಲ ಎಂದು ತನಿಖೆಯಲ್ಲಿ ಧೃಢಪಟ್ಟಿದೆ.

ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಯಲ್ಲಿ ಜನವರಿ 1, 2026ರಂದು ಸಲ್ಲಿಸಲಾದ ದೂರಿನಲ್ಲಿ ಸಂದೀಪ್ ಪಾಟೀಲ್ (ನಾಸಿಕ್ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ) “ಗೋವಾದಿಂದ ಅಹಮದಾಬಾದ್‌ನ ಒಂದು ಆಶ್ರಮಕ್ಕೆ ಕರ್ನಾಟಕ ಮಾರ್ಗವಾಗಿ ಸಾಗಿಸುತ್ತಿದ್ದ ಎರಡು ಕಂಟೇನರ್ ಟ್ರಕ್‌ಗಳಲ್ಲಿ 400 ಕೋಟಿ ರೂಪಾಯಿ ಮೌಲ್ಯದ ರದ್ದಾದ 2,000 ರೂ.ನೋಟುಗಳನ್ನು ಚೋರ್ಲಾ ಘಾಟ್ ಬಳಿ (ಖಾನಾಪುರ ತಾಲೂಕು, ಬೆಳಗಾವಿ ಜಿಲ್ಲೆ) ದರೋಡೆ ಮಾಡಲಾಗಿದೆ. ನನ್ನನ್ನು ಅಪಹರಿಸಿ, ಹಲ್ಲೆ ನಡೆಸಿ ಬೆದರಿಕೆ ಹಾಕಲಾಗಿದೆ” ಎಂದು ಹೇಳಿದ್ದರು. ಬಳಿಕ ಠಾಣೆಗೆ ದೂರು ಸಹ ದಾಖಲಿಸಿದ್ದರು.

ಈ ದೂರಿನ ಬೆನ್ನಲ್ಲೇ ಮಹಾರಾಷ್ಟ್ರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದರು – ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸಾವಳೆ (ಹಣದ ಮಾಲೀಕ ಎಂಬ ಆರೋಪ), ಹವಾಲಾ ಏಜೆಂಟ್ ವಿರಾಟ್ ಗಾಂಧಿ, ಜಯೇಶ್ ಕಡಂ, ವಿಶಾಲ್ ನಾಯ್ಡು, ಸುನೀಲ್ ಧುಮಾಳ್, ಮಚ್ಚೀಂದ್ರ ಮಾಡವಿ ಮತ್ತು ಜನಾರ್ಧನ್ ಧಾಯ್ಗುಡೆ. ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತು. ಬೆಳಗಾವಿ, ಗೋವಾ ಮತ್ತು ಮಹಾರಾಷ್ಟ್ರ ಪೊಲೀಸರು ಸಂಯುಕ್ತ ತನಿಖೆ ನಡೆಸಿದ್ದರು. ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಅವರು “ಕರ್ನಾಟಕದಲ್ಲಿ ಯಾವುದೇ ದೂರು ಬಂದಿಲ್ಲ, ಸಾಕ್ಷ್ಯವೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ರಚಿಸಿ ಒಂದು ತಿಂಗಳ ಕಾಲ ತೀವ್ರ ತನಿಖೆ ನಡೆಸಿತು. ಡಿಜಿಟಲ್ ಆಧಾರಗಳು, ಕರೆ ವಿವರಗಳು (ಸಿಡಿಆರ್), ಜಿಪಿಎಸ್, ಪ್ರಯಾಣ ಮಾರ್ಗ, ಸಮಯ ವ್ಯತ್ಯಾಸಗಳು ಪರಿಶೀಲಿಸಲಾಯಿತು. ಬಾಹ್ಯ ಏಜೆನ್ಸಿಗಳಿಂದಲೂ ಯಾವುದೇ ದರೋಡೆ ನಡೆದಿಲ್ಲ ಎಂಬ ಮಾಹಿತಿ ಬಂದಿತು. “ಪ್ರಕರಣವೇ ಸುಳ್ಳು, ಯಾವುದೇ ಕಂಟೇನರ್ ದರೋಡೆಯಾಗಿಲ್ಲ” ಎಂದು ಎಸ್‌ಐಟಿ ವರದಿ ಮಹಾರಾಷ್ಟ್ರ ಸರ್ಕಾರಕ್ಕೆ ಸಲ್ಲಿಸಿದೆ.

ನಾಸಿಕ್‌ನ ಇಗತ್‌ಪುರಿ ನ್ಯಾಯಾಲಯವು ಏಳು ಆರೋಪಿಗಳನ್ನೂ ಸಾಕ್ಷ್ಯ ಕೊರತೆಯಿಂದ ಬಿಡುಗಡೆ ಮಾಡಿದೆ. ನಾಸಿಕ್ ಗ್ರಾಮೀಣ ಪೊಲೀಸರು ಈಗ ಸಂದೀಪ್ ಪಾಟೀಲ್ ವಿರುದ್ಧ ಸುಳ್ಳು ದೂರು ದಾಖಲಿಸಿದ ಆರೋಪದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ಪೊಲೀಸ್ ಸಂಪನ್ಮೂಲಗಳು ಒಂದು ತಿಂಗಳ ಕಾಲ ವ್ಯರ್ಥವಾಗಿವೆ ಎಂದು ಅಧಿಕಾರಿಗಳು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣ ಜನವರಿಯಲ್ಲಿ ರಾಜಕೀಯ ವಿವಾದಕ್ಕೂ ಕಾರಣವಾಗಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಗಡಿ ಸುರಕ್ಷತೆ, ಪೊಲೀಸ್ ತನಿಖೆ ಬಗ್ಗೆ ಆರೋಪ-ಪ್ರತ್ಯಾರೋಪಗಳು ನಡೆದಿದ್ದವು. ಈಗ ಎಲ್ಲವೂ ‘ಕಟ್ಟುಕಥೆ’ ಎಂದು ಸಾಬೀತಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

8 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

8 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

8 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago