ಕೇಪ್ಟೌನ್: ಈಸ್ಟರ್ ಹಬ್ಬಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಸೇತುವೆ ಮೇಲಿಂದ ಉರುಳಿದ ಪರಿಣಾಮ 45 ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಆಫ್ರಿಕಾದ ಕೇಪ್ಟೌನ್ನಲ್ಲಿ ನಡೆದಿದೆ.
ಮಮಟ್ಲಕಾ ಸೇತುವೆಯಿಂದ ಬಸ್ 164 ಅಡಿ ಕೆಳಕ್ಕೆ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತುಕೊಂಡಿದೆ. ಘಟನೆಯಲ್ಲಿ 45 ಮಂದಿ ಸಾವನ್ನಪ್ಪಿದ್ದು, 8 ವರ್ಷದ ಬಾಲಕನೊಬ್ಬ ಅದೃಷ್ಟವಷಾತ್ ಬದುಕುಳಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಏರ್ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಲಿಂಪೊಪೊ ಉತ್ತರ ಪ್ರಾಂತ್ಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಬಸ್ ವೇಗವಾಗಿ ಚಲಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗುರುಳಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ನಲ್ಲಿದ್ದ ಜನರು ನೆರೆಯ ದೇಶವಾದ ನೆರೆ ದೇಶ ಬೋಟ್ಸ್ವಾನಾದಿಂದ ಈಸ್ಟರ್ ತೀರ್ಥಯಾತ್ರೆಗಾಗಿ ಮೊರಿಯಾ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…