ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ.
ಚುನಾವಣಾ ಆಯೋಗದ ವಿಜ್ಞಾನ್ ಭವನ್ನಲ್ಲಿ ಭಾನುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಏ.9ರಂದು ಚುನವಣಾ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 23 ಮೊದಲ ಹಂತ, 29ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ಐದು ರಾಜ್ಯ ಮತ ಎಣಿಕೆ ಮೇ 4ರಂದು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬ, ಎಲ್ಲರೂ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು. ನಾಲ್ಕು ರಾಜ್ಯಗಳು ಒಂದು ಕೇಂದ್ರಾಡಳಿತ ಪ್ರದೇಶದ 2.19 ಲಕ್ಷ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 25 ಲಕ್ಷ ಚುನಾವಣಾ ಅಧಿಕಾರಿಗಳು ಕರ್ತವ್ಯದಲ್ಲಿರಲಿದ್ದಾರೆ ಎಂದು ಹೇಳಿದ್ದಾರೆ.
ಐದು ರಾಜ್ಯಗಳ ಚುನಾವಣೆಯಲ್ಲಿ 17.4 ಕೋಟಿ ಮತದಾನದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ತಿಳಿಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…