ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಬೇಹಿಬಾಗ್ ಪ್ರದೇಶದಲ್ಲಿ ಉಗ್ರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.
ಕಳೆದ ರಾತ್ರಿಯಿಂದಲೇ ಆರಂಭಿಸಿದ್ದ ಕಾರ್ಯಾಚರಣೆ ಇಂದು ಬೆಳಿಗ್ಗೆಯೂ ಮುಂದುವರಿದಿತ್ತು. ಉಗ್ರರು ಅಡಗಿ ಕುಳಿತಿದ್ದ ಸ್ಥಳದತ್ತ ಭದ್ರತಾ ಪಡೆಗಳು ತಲುಪುವ ವೇಳೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು ಎನ್ನಲಾಗಿದೆ.
ಈ ವೇಳೆ ತೀವ್ರ ಕಾರ್ಯಾಚರಣೆ ನಡೆಸಿದ ಯೋಧರು, ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿ, ಐವರನ್ನು ಸೆದೆ ಬಡಿದಿದ್ದಾರೆ.
ಈ ನಡುವೆ ಕಾರ್ಯಾಚರಣೆ ವೇಳೆ ಇಬ್ಬರು ಯೋಧರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಇನ್ನೂ ಹಲವಯ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರಿದಿದೆ.
ಈ ಹಿನ್ನೆಲೆಯಲ್ಲಿ ಜಮ್ಮ ಮತ್ತು ಕಾಶ್ಮೀರದ ಎಲ್ಲಾ ನಿಲ್ದಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು, ಹಲವು ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.
ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಕರೆ ಮಾಡಿ ತಿಳಿಸುವಂತೆ ಜನತೆಗೆ ಪೊಲೀಸರು ಸೂಚನೆ ನೀಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…