15 ಮಂದಿ ಪ್ರವಾಹದಲ್ಲಿ ಸಿಲುಕಿರುವ ಶಂಕೆ
ಪುಣೆ : ಪ್ರವಾಸಿಗರಿಗಾಗಿ ನಿರ್ಮಿಸಲಾಗಿರುವ ಸೇತುವೆಯೊಂದು ಕುಸಿತು ಬಿದ್ದ ಪರಿಣಾಮ ಐದು ಮಂದಿ ಸಾವನ್ನಪ್ಪಿ, ಅನೇಕ ಜನರು ನದಿಗೆ ಬಿದ್ದಿರುವ ಘಟನೆ ಭಾನುವಾರ ನಡೆದಿದೆ.
ಪುಣೆಯ ಕುಂದಮಲ ಪ್ರದೇಶದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಕುಸಿದಿರುವುದು.
ಘಟನೆಯಲ್ಲಿ ಕನಿಷ್ಠ ಐದು ಮಂದಿ ಸಾವನಪ್ಪಿದ್ದು, 10-15 ಮಂದಿ ನದಿ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿ ಕಾರ್ಯಚರಣೆ ನಡೆಸುತ್ತಿವೆ. ಜನರನ್ನು ರಕ್ಷಿಸುವುದು ಆರಂಭಿಕೆ ಆದ್ಯತೆಯಾಗಿದೆ ಎಂದು ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.
ಸಂತ ತುಕಾರಾಮ ಪವಿತ್ರ ಸ್ಥಳವಾದ ಇಲ್ಲಿಗೆ ಅನೇಕರು ಭೇಟಿ ನೀಡುತ್ತಾರೆ. ವಾರಾಂತ್ಯಗಳಲಂತೂ ಹೆಚ್ಚು ಜನರು ಭೇಟಿ ನೀಡುತ್ತಾರೆ.
ಪುಣೆಯ ಈ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…