ಕೇರಳ (ವಯನಾಡ್): ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ, ಚುರ್ಲಮಲಾ ಪ್ರದೇಶಗಳಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮೃತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ಸೋಮವಾರದಿಂದ ಸುರಿಯುತ್ತಿರುವ ಭಾರೀ ಮಳೆ ತಡರಾತ್ರಿ ಜೋರಾಗಿದ್ದು, ಮಧ್ಯರಾತ್ರಿ 2 ಗಂಟೆಯಿಂದ ಬೆಳಗಿನ ಜಾವ 6 ಗಂಟೆ ವೇಳೆಗೆ ಭಾರೀ ಭೂ ಕುಸಿತ ಉಂಟಾಗಿದೆ.
ಈ ಭೂಕುಸಿತದಲ್ಲಿ ನೂರಾರು ಮನೆಗಳು ಕೊಚ್ಚಿ ಹೋಗಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಚುರ್ಲಮಲಾ ಬಹುತೇಕ ಭೂ ಕುಸಿತಕ್ಕೆ ಸಿಕ್ಕಿದೆ. ಚುರ್ಲಮಲದಿಂದ ಮೆಪ್ಪಾಡಿ ಮಾರ್ಗ ಕಲ್ಪಿಸುವ ರಸ್ತೆ ಭಾಗಶಃ ನಾಶವಾಗಿದೆ.
ಚಾಲಿಯಾರ್ ನದಿ ಉಕ್ಕಿ ಅರಿಯುತ್ತಿದ್ದು, ಇದರ ರಭಸಕ್ಕೆ ಇಡೀ ಗ್ರಾಮವೇ ತತ್ತರಿಸಿ ಹೋಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಈ ಬಗ್ಗೆ ಕೇಂದ್ರ ಸರ್ಕಾರವೂ ಕೂಡಾ ಚರ್ಚೆ ಮಾಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ.
ಇನ್ನು ಚುರ್ಲಮಲಾ ಭೂಕುಸಿತದಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಎರಡು ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗಿದ್ದು, ಎಲ್ಲರ ರಕ್ಷಣೆ ಮಾಡುವ ಭರವಸೆ ಸಿಎಂ ಪಿಣರಾಯಿ ವಿಜಯನ್ ನೀಡಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…