ನವದೆಹಲಿ: 2024ರ ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಪೂರ್ಣಗೊಂಡಿದ್ದು, ಇಂದು (ಸೋಮವಾರ, ಮೇ.20) ನಡೆದ ಚುನಾವಣೆಯಲ್ಲಿ ಶೇ.57.47 ರಷ್ಟು ಮಂದಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.
5ನೇ ಹಂತದಲ್ಲಿ ಒಟ್ಟು 8 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಈ ಹಂತದಲ್ಲಿ ಒಟ್ಟು 49 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಬೆಳಗ್ಗೆ 7ಕ್ಕೆ ಶರುವಾದ ಮತದಾನ ಸಂಜೆ 7ರವರೆಗೂ ನಡೆಯಿತು.
ಮಹಾರಾಷ್ಟ್ರದಲ್ಲಿ ಅತಿ ಕಡಿಮೆ ಹಾಗೂ ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಮತದಾನ ಪ್ರವಾಣ ದಾಖಲಾಗಿದೆ. 5ನೇ ಹಂತದಲ್ಲಿ ಬಿಹಾರದ ಐದು, ಜಮ್ಮುಕಾಶ್ಮೀರದ ಒಂದು, ಜಾರ್ಖಂಡ್ನ ಮೂರು ಹಾಗೂ ಲಡಾಕ್ನ ಒಂದು, ಮಹಾರಾಷ್ಟ್ರದ 13 ಹಾಗೂ ಒಡಿಶಾದ ಐದು, ಉತ್ತರಪ್ರದೇಶದ 14 ಹಾಗೂ ಪಶ್ಚಿಮ ಬಂಗಾಳದ 7 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು.
49 ಕ್ಷೇತ್ರಗಳಲ್ಲಿ ಒಟ್ಟು 695 ಅಭ್ಯರ್ಥಿಗಳು ಕಣದಲ್ಲಿದ್ದು, ಮಹಾರಾಷ್ಟ್ರದಲ್ಲಿ ಗರಿಷ್ಟ 264 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ (ರಾಯ್ಬರೇಲಿ), ಕಿಶೋರಿ ಲಾಲ್ ಶರ್ವಾ (ಆಮೇಠಿ), ಬಿಜೆಪಿ ಸ್ಮತಿ ಇರಾನಿ (ಆಮೇಥಿ), ಪಿಯೂಷ್ ಗೋಯಲ್ (ಮುಂಬೈ ಉತ್ತರ), ರಾಜನಾಥ ಸಿಂಗ್ (ಲಕ್ನೋ) ಹಾಗ ಚಿರಾಗ್ ಪಾಸ್ವಾನ್ (ಹಾಜಿಪುರ) ಕಣದಲ್ಲಿದ್ದ ಪ್ರಮುಖ ಸ್ಪರ್ಧಿಗಳಿವರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…