ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಟ್ಟಡದಿಂದ ಈವರೆಗೆ ಆರು ಜನರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಯುತ್ತಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ, ಅಂಬುಲೆನ್ಸ್ ಮತ್ತು ಇತರ ತುರ್ತು ಸೇವೆಗಳನ್ನು ಸ್ಥಳದಲ್ಲಿ ಕಲ್ಪಿಸಲಾಗಿದೆ.
75 ಹಾಸಿಗೆಗಳ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿದ್ದ ಕಟ್ಟಡ ಮಧ್ಯಾಹ್ನ 1:30 ರ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡ ಕುಸಿದಾಗ ಕನಿಷ್ಠ 50 ವಿದ್ಯಾರ್ಥಿಗಳು ಒಳಗೆ ಇದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಕುಸಿದ ಕಟ್ಟಡವು ‘ಹಾಸ್ಟೆಲ್ ಡೇಜ್’ ಹೆಸರಿನ ಪುರುಷರ ಪಿಜಿ ಎಂದು ತಿಳಿದುಬಂದಿದೆ.
ಕನಿಷ್ಠ 12 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ರಕ್ಷಣಾ ಕಾರ್ಯಕ್ಕಾಗಿ ಈಗಾಗಲೇ ಜೆಸಿಬಿ ಯಂತ್ರವನ್ನು ನಿಯೋಜಿಸಲಾಗಿದ್ದು, ಚಪ್ಪಡಿಗಳು ಮತ್ತು ಗಿರ್ಡರ್ಗಳನ್ನು ತೆಗೆದುಹಾಕಲು ಹೆಚ್ಚಿನ ಯಂತ್ರೋಪಕರಣಗಳನ್ನು ತರಲಾಗುತ್ತಿದೆ. ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಗ್ನಿಶಾಮಕ ತಂಡಗಳಿಗೆ ಸಹಾಯ ಮಾಡಲು ವಿಪತ್ತು ಪ್ರತಿಕ್ರಿಯೆ ತಂಡಗಳನ್ನು ಸಹ ನಿಯೋಜಿಸಲಾಗಿದೆ. ಕಟ್ಟಡ ಕುಸಿತದ ಬಗ್ಗೆ ಸಿಎಂ ರೇಖಾ ಗುಪ್ತ ಮಾಹಿತಿ ಪಡೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…