Mysore
32
scattered clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ರಾಘವ್‌ ಚಡ್ಡಾ, ಅಶೋಕ್‌ ಮಿತ್ತಲ್‌, ಸಂದೀಪ್‌ ಪಾಠಕ್‌ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ರಾಜ್ಯಸಭಾ ಸದಸ್ಯರ ಪೈಕಿ 2/3 ಸದಸ್ಯರು ಬೆಂಬಲ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ರಾಘವ್‌ ಚಡ್ಡಾ ತಿಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ನಾನು ತಪ್ಪು ಪಕ್ಷದಲ್ಲಿ ಕೆಲಸ ಮಾಡುವ ಸರಿಯಾದ ವ್ಯಕ್ತಿ ಎಂದು ನನಗೆ ಅನಿಸುತ್ತಿದೆ. ಆದ್ದರಿದ ಇಂದು ನಾನು ಎಎಪಿಯಿಂದ ದೂರ ಸರಿಯುತ್ತಿದ್ದೇನೆ ಹಾಗೂ ಸಾರ್ವಜನಿಕರಿಗೆ ಹತ್ತಿರವಾಗುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ.

 

Tags:
error: Content is protected !!