ದೇಶ- ವಿದೇಶ

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು ಎಸೆದ ಘಟನೆಗೆ ಸಂಬಂಧಿಸಿದಂತೆ 8 ಮಂದಿ ಪ್ರತಿಪಕ್ಷದ ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಲಾಗಿದೆ.

ಮಾಣಿಕ್ಯ ಟ್ಯಾಗೋರ್‌, ಗುರ್ಜೀತಾ ಓಜ್ಲಾ, ರಾಣಾ ವಾರಿಂಗ್‌, ಇಬಿ ಈಡನ್‌, ಕಿರಣ್‌ ರೆಡ್ಡಿ, ವೆಂಕಟ ರಾಮನ್‌, ಅಮರಿಂದರ್‌ ಸಿಂಗ್‌, ಕಿರಣ್‌ ಕುಮಾರ್‌ ರೆಡ್ಡಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಘಟನೆ ಹಿನ್ನೆಲೆ: ಬಜೆಟ್‌ ಅಧಿವೇಶನದ ಕಲಾಪದ ವೇಳೆ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದವು. ಈ ಹಂತದಲ್ಲಿ ಸಂಸದರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದ್ದಲ್ಲದೇ, ಕೈಯಲ್ಲಿದ್ದ ಪೇಪರ್‌ಗಳನ್ನು ಹರಿದು ಸ್ಪೀಕರ್‌ ಪೀಠದ ಕಡೆಗೆ ತೂರಿದ್ದಾರೆ. ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸಭಾಧ್ಯಕ್ಷರು ಸಂಸದರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago