ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ.
ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಅವರುಗಳನ್ನು ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡ ಬಂಧಿಸಿದೆ.
ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾನಿ ಚೆಲ್ಲಪ್ಪ ಹೆಸರಿನ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ನಡೆದ ಆಪರೇಷನ್ನಲ್ಲಿ ನಟಿ ಸೇರಿದಂತೆ ಇತರರ ಬಂಧನವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರವಕ್ಕಂ ಎಂಬಲ್ಲಿ 33 ವರ್ಷದ ವಿಘ್ನೆಶ್ವರನ್ ಎಂಬಾತನನ್ನು ಪೊಲೀಸ್ ಬಂಧಿಸಿದ್ದರು. ಆತನ ವಿಚಾರಣೆ ಮಾಡಿದಾಗ ಆತ ವೆಂಕಟೇಶ್ ಹೆಸರಿನ ವ್ಯಕ್ತಿಯಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿರುವ ಅಂಶ ತಿಳಿದು ಬಂತು. ಬಳಿಕ ವೆಂಕಟೇಶ್ ಎಂಬಾತನನ್ನು ಪೊಲೀಸರು ಗ್ರಾಹಕನ ರೀತಿ ಸಂಪರ್ಕ ಮಾಡಿ, ಡ್ರಗ್ಸ್ ಮಾರುವಂತೆ ಹೇಳಿ, ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆ ವ್ಯಕ್ತಿ ಬಂದಾಗ ಆತನನ್ನು ಬಂಧಿಸಿ, ಆತನಿಂದ ಆರು ಗ್ರಾಂ ಮೆಥಾಫೆಟಮೈನ್, ಏಳು ಗ್ರಾಂ ಓಜಿ ಗಾಂಜಾ, ಹದಿನೈದು ಗ್ರಾಂ ಗಾಂಜಾ, ಸ್ಮೊಕಿಂಗ್ ಬಾಂಗ್, ಸ್ಟ್ಯಾಂಪ್ ಮತ್ತು ಒಂಬತ್ತು ಮೊಬೈಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಆತನ ಮಾಹಿತಿಯ ಮೇರೆಗೆ ಪೊಲೀಸರು ಇತರೆ ಕೆಲವರನ್ನು ಬಂಧಿಸಿದ್ದು, ಈ ವೇಳೆ, ನಟಿ ಅಂಜು ಕೃಷ್ಣ ಮತ್ತು ಸಹಾಯಕಿ ನಿರ್ದೇಶಕಿ ವಿನ್ಸಿ ನಿವೇತಾ ಅನ್ನು ಸಹ ಬಂಧಿಸಲಾಗಿದೆ. ಅಂಜು ಕೃಷ್ಣ ತಮಿಳಿನ ವೆಲ್ಲಿಮಲೈ ಮಲಯಾಳಂನ ಆರೊ, ಆಕಾಶಂ ಕದನ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…