ದೇಶ- ವಿದೇಶ

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ.

ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಅವರುಗಳನ್ನು ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡ ಬಂಧಿಸಿದೆ.‌

ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾನಿ ಚೆಲ್ಲಪ್ಪ ಹೆಸರಿನ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ನಡೆದ ಆಪರೇಷನ್‍ನಲ್ಲಿ ನಟಿ ಸೇರಿದಂತೆ ಇತರರ ಬಂಧನವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರವಕ್ಕಂ ಎಂಬಲ್ಲಿ 33 ವರ್ಷದ ವಿಘ್ನೆಶ್ವರನ್ ಎಂಬಾತನನ್ನು ಪೊಲೀಸ್ ಬಂಧಿಸಿದ್ದರು. ಆತನ ವಿಚಾರಣೆ ಮಾಡಿದಾಗ ಆತ ವೆಂಕಟೇಶ್ ಹೆಸರಿನ ವ್ಯಕ್ತಿಯಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿರುವ ಅಂಶ ತಿಳಿದು ಬಂತು. ಬಳಿಕ ವೆಂಕಟೇಶ್ ಎಂಬಾತನನ್ನು ಪೊಲೀಸರು ಗ್ರಾಹಕನ ರೀತಿ ಸಂಪರ್ಕ ಮಾಡಿ, ಡ್ರಗ್ಸ್ ಮಾರುವಂತೆ ಹೇಳಿ, ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆ ವ್ಯಕ್ತಿ ಬಂದಾಗ ಆತನನ್ನು ಬಂಧಿಸಿ, ಆತನಿಂದ ಆರು ಗ್ರಾಂ ಮೆಥಾಫೆಟಮೈನ್, ಏಳು ಗ್ರಾಂ ಓಜಿ ಗಾಂಜಾ, ಹದಿನೈದು ಗ್ರಾಂ ಗಾಂಜಾ, ಸ್ಮೊಕಿಂಗ್ ಬಾಂಗ್, ಸ್ಟ್ಯಾಂಪ್ ಮತ್ತು ಒಂಬತ್ತು ಮೊಬೈಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಆತನ ಮಾಹಿತಿಯ ಮೇರೆಗೆ ಪೊಲೀಸರು ಇತರೆ ಕೆಲವರನ್ನು ಬಂಧಿಸಿದ್ದು, ಈ ವೇಳೆ, ನಟಿ ಅಂಜು ಕೃಷ್ಣ ಮತ್ತು ಸಹಾಯಕಿ ನಿರ್ದೇಶಕಿ ವಿನ್ಸಿ ನಿವೇತಾ ಅನ್ನು ಸಹ ಬಂಧಿಸಲಾಗಿದೆ. ಅಂಜು ಕೃಷ್ಣ ತಮಿಳಿನ ವೆಲ್ಲಿಮಲೈ ಮಲಯಾಳಂನ ಆರೊ, ಆಕಾಶಂ ಕದನ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

14 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

24 hours ago